25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

ಬಳಂಜ : ಹಿಂಬದಿಯಿಂದ ಬಂದು ತನ್ನನ್ನು ತಳ್ಳಿ, ಈ ಬಗ್ಗೆ ಪ್ರಶ್ನಿಸಿದಾಗ ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಬಳಂಜ ಗ್ರಾಮದ ಪ್ರಕಾಶ್ ಶೆಟ್ಟಿಯವರು ಅಶ್ವಿನ್ ಪೂಜಾರಿ ಎಂಬವರ ವಿರುದ್ಧ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕಾಶ್‌ ಶೆಟ್ಟಿ ಹಾಗೂ ಅಶ್ವಿನ್‌ ಪೂಜಾರಿ ಎಂಬಾತನಿಗೂ ಎಲೆಕ್ಟ್ರೀಷಿಯನ್ ಕೆಲಸದ ವಿಚಾರವಾಗಿ ಮನಸ್ತಾಪ ಇದ್ದು, ಮೇ 20 ರಂದು ರಾತ್ರಿ ಪ್ರಕಾಶ್ ಶೆಟ್ಟಿಯವರು ಬಳೆಂಜ ಗ್ರಾಮದಲ್ಲಿ ತನ್ನ ಪರಿಚಯಸ್ಥರ ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳಿದ್ದು, ಅದೇ ಕಾರ್ಯಕ್ರಮಕ್ಕೆ ಆಶ್ವಿನ್ ತನ್ನ ತಾಯಿಯೊಂದಿಗೆ ಬಂದಿರುತ್ತಾರೆ. ಈ ವೇಳೆ ಪ್ರಶಾಂತ್ ಪೂಜಾರಿ ರವರು ಮನೆಯ ಅಂಗಳದಲ್ಲಿ ನಿಂತಿದ್ದ ಸಮಯ, ಅಶ್ವಿನ್ ಎಂಬಾತನು ಹಿಂಬದಿಯಿಂದ ಬಂದು ತಳ್ಳಿದ್ದು, ಈ ಬಗ್ಗೆ ಪ್ರಕಾಶ್ ಶೆಟ್ಟಿ ಪ್ರಶ್ನಿಸಿದಾಗ. ಆರೋಪಿಯು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುತ್ತಾರೆ ಎಂದು ಪ್ರಕಾಶ್ ಶೆಟ್ಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.


ಹಲ್ಲೆಯಿಂದ ಗಾಯಗೊಂಡ ಪ್ರಕಾಶ್ ಶೆಟ್ಟಿಯವರು ಬೆಳ್ತಂಗಡಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ ಈ ದೂರನ್ನು ನೀಡಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 48/2024 ಕಲಂ : 341, 323,504, 506 ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya
error: Content is protected !!