24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

ಬಳಂಜ : ಹಿಂಬದಿಯಿಂದ ಬಂದು ತನ್ನನ್ನು ತಳ್ಳಿ, ಈ ಬಗ್ಗೆ ಪ್ರಶ್ನಿಸಿದಾಗ ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಬಳಂಜ ಗ್ರಾಮದ ಪ್ರಕಾಶ್ ಶೆಟ್ಟಿಯವರು ಅಶ್ವಿನ್ ಪೂಜಾರಿ ಎಂಬವರ ವಿರುದ್ಧ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕಾಶ್‌ ಶೆಟ್ಟಿ ಹಾಗೂ ಅಶ್ವಿನ್‌ ಪೂಜಾರಿ ಎಂಬಾತನಿಗೂ ಎಲೆಕ್ಟ್ರೀಷಿಯನ್ ಕೆಲಸದ ವಿಚಾರವಾಗಿ ಮನಸ್ತಾಪ ಇದ್ದು, ಮೇ 20 ರಂದು ರಾತ್ರಿ ಪ್ರಕಾಶ್ ಶೆಟ್ಟಿಯವರು ಬಳೆಂಜ ಗ್ರಾಮದಲ್ಲಿ ತನ್ನ ಪರಿಚಯಸ್ಥರ ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳಿದ್ದು, ಅದೇ ಕಾರ್ಯಕ್ರಮಕ್ಕೆ ಆಶ್ವಿನ್ ತನ್ನ ತಾಯಿಯೊಂದಿಗೆ ಬಂದಿರುತ್ತಾರೆ. ಈ ವೇಳೆ ಪ್ರಶಾಂತ್ ಪೂಜಾರಿ ರವರು ಮನೆಯ ಅಂಗಳದಲ್ಲಿ ನಿಂತಿದ್ದ ಸಮಯ, ಅಶ್ವಿನ್ ಎಂಬಾತನು ಹಿಂಬದಿಯಿಂದ ಬಂದು ತಳ್ಳಿದ್ದು, ಈ ಬಗ್ಗೆ ಪ್ರಕಾಶ್ ಶೆಟ್ಟಿ ಪ್ರಶ್ನಿಸಿದಾಗ. ಆರೋಪಿಯು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುತ್ತಾರೆ ಎಂದು ಪ್ರಕಾಶ್ ಶೆಟ್ಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.


ಹಲ್ಲೆಯಿಂದ ಗಾಯಗೊಂಡ ಪ್ರಕಾಶ್ ಶೆಟ್ಟಿಯವರು ಬೆಳ್ತಂಗಡಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ ಈ ದೂರನ್ನು ನೀಡಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 48/2024 ಕಲಂ : 341, 323,504, 506 ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya
error: Content is protected !!