April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

ಬೆಳ್ತಂಗಡಿ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ನಾಯಕರ ಶೃಂಗ ಸಭೆ ಅಧ್ಯಕ್ಷರಾದ ನವಾಝ್ ಕಟ್ಟೆ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ಮೇ 22 ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಫೈಝಿ ಭಾರತ ದೇಶದ ಪ್ರಸಕ್ತ ಸನ್ನಿವೇಶ ಹಾಗೂ ಇದಕ್ಕಿರುವ ಪರಿಹಾರವನ್ನು ನಾಯಕರಿಗೆ ಮನವರಿಕೆ ಮಾಡಿಕೊಟ್ಟರು.
ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಸಮಾರೋಪ ಭಾಷಣವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಸುಹೈಲ್ ಖಾನ್, ಬೆಳ್ತಂಗಡಿ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಹನೀಫ್ ಪುಂಜಾಲಕಟ್ಟೆ, ಇನಾಸ್ ರೋಡ್ರಿಗಸ್, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಫಝಲ್ ಉಜಿರೆ, ಸಾದಿಕ್ ಲಾಯಿಲ, ಕೋಶಾಧಿಕಾರಿ ಅಶ್ರಫ್ ಕಟ್ಟೆ ಹಾಗೂ ಕ್ಷೇತ್ರ ವ್ಯಾಪ್ತಿಯ ಎಲ್ಲಾ ನಾಯಕರು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಗುಡ್ ಫ್ಯೂಚರ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya
error: Content is protected !!