ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿದ್ಯಾರ್ಥಿಗಳಿಗೆ ಎರಡು ದಿನಗಳ ಕಾಲ ನಡೆಯುವ ಬೇಸಿಗೆ ಶಿಬಿರವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಉದ್ಘಾಟಿಸಿದರು.

ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಿ ಯದುಪತಿ ಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ, ರೇಂಜರ್ ಲೀಡರ್ ಶ್ರೀಮತಿ ರಕ್ಷಾ ಎ, ಗೈಡ್ಸ್ ಕ್ಯಾಪ್ಟನ್ ಗಳಾದ ಶ್ರೀಮತಿ ಶೋಭಾ ನವೀನ್ ಮತ್ತು ಶ್ರೀಮತಿ ಭವ್ಯ, ಕಬ್ ಮಾಸ್ಟರ್ ಶ್ರೀಮತಿ ಹೇಮಲತಾ, ಪ್ಲಾಕ್ ಲೀಡರ್ ಶ್ರೀಮತಿ ನಮಿತಾ ಉಪಸ್ಥಿತರಿದ್ದರು.

ರೋವರ್ ಸ್ಕೌಟ್ ಲೀಡರ್ ಬೆಳಿಯಪ್ಪ ಕೆ ಸ್ವಾಗತಿಸಿದರು. ಗೈಡ್ಸ್ ಕ್ಯಾಪ್ಟನ್ ಶ್ರೀಮತಿ ಸುಮಲತಾ ಧನ್ಯವಾದವಿತ್ತರು. ರೇಂಜರ್ ವಿದ್ಯಾರ್ಥಿನಿ ಸಿಂಚನ ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!