September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿದ್ಯಾರ್ಥಿಗಳಿಗೆ ಎರಡು ದಿನಗಳ ಕಾಲ ನಡೆಯುವ ಬೇಸಿಗೆ ಶಿಬಿರವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಉದ್ಘಾಟಿಸಿದರು.

ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಿ ಯದುಪತಿ ಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ, ರೇಂಜರ್ ಲೀಡರ್ ಶ್ರೀಮತಿ ರಕ್ಷಾ ಎ, ಗೈಡ್ಸ್ ಕ್ಯಾಪ್ಟನ್ ಗಳಾದ ಶ್ರೀಮತಿ ಶೋಭಾ ನವೀನ್ ಮತ್ತು ಶ್ರೀಮತಿ ಭವ್ಯ, ಕಬ್ ಮಾಸ್ಟರ್ ಶ್ರೀಮತಿ ಹೇಮಲತಾ, ಪ್ಲಾಕ್ ಲೀಡರ್ ಶ್ರೀಮತಿ ನಮಿತಾ ಉಪಸ್ಥಿತರಿದ್ದರು.

ರೋವರ್ ಸ್ಕೌಟ್ ಲೀಡರ್ ಬೆಳಿಯಪ್ಪ ಕೆ ಸ್ವಾಗತಿಸಿದರು. ಗೈಡ್ಸ್ ಕ್ಯಾಪ್ಟನ್ ಶ್ರೀಮತಿ ಸುಮಲತಾ ಧನ್ಯವಾದವಿತ್ತರು. ರೇಂಜರ್ ವಿದ್ಯಾರ್ಥಿನಿ ಸಿಂಚನ ಕಾರ್ಯಕ್ರಮ ನಿರೂಪಿಸಿದರು.

Related posts

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ : ನಡುಗುಡ್ಡೆಕುಡುಮ ಶ್ರೀ ಟೈಗರ್ಸ್ ವತಿಯಿಂದ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ ಹಾಗೂ ವಿದ್ಯಾನಿಧಿ ವಿತರಣೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
error: Content is protected !!