22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿದ್ಯಾರ್ಥಿಗಳಿಗೆ ಎರಡು ದಿನಗಳ ಕಾಲ ನಡೆಯುವ ಬೇಸಿಗೆ ಶಿಬಿರವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಉದ್ಘಾಟಿಸಿದರು.

ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಿ ಯದುಪತಿ ಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ, ರೇಂಜರ್ ಲೀಡರ್ ಶ್ರೀಮತಿ ರಕ್ಷಾ ಎ, ಗೈಡ್ಸ್ ಕ್ಯಾಪ್ಟನ್ ಗಳಾದ ಶ್ರೀಮತಿ ಶೋಭಾ ನವೀನ್ ಮತ್ತು ಶ್ರೀಮತಿ ಭವ್ಯ, ಕಬ್ ಮಾಸ್ಟರ್ ಶ್ರೀಮತಿ ಹೇಮಲತಾ, ಪ್ಲಾಕ್ ಲೀಡರ್ ಶ್ರೀಮತಿ ನಮಿತಾ ಉಪಸ್ಥಿತರಿದ್ದರು.

ರೋವರ್ ಸ್ಕೌಟ್ ಲೀಡರ್ ಬೆಳಿಯಪ್ಪ ಕೆ ಸ್ವಾಗತಿಸಿದರು. ಗೈಡ್ಸ್ ಕ್ಯಾಪ್ಟನ್ ಶ್ರೀಮತಿ ಸುಮಲತಾ ಧನ್ಯವಾದವಿತ್ತರು. ರೇಂಜರ್ ವಿದ್ಯಾರ್ಥಿನಿ ಸಿಂಚನ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya
error: Content is protected !!