24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿದ್ದಂತಹ ಡಾ. ಬಿ ಯಶೋವರ್ಮ ಅವರಿಗೆ ಅವರ ಎರಡನೆಯ ಪುಣ್ಯಸ್ಮರಣೆ ಯಶೋನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಹ ಶಿಕ್ಷಕಿ ಶ್ರೀಮತಿ ರಾಮಾರಾಜೇಶ್ ಹಾಗೂ ಶ್ರೀಮತಿ ಆಶಾ ಡಾ.ಯಶೋವರ್ಮರವರ ಪುಸ್ತಕ ಪ್ರೀತಿ,ನಡೆ ನುಡಿ, ಆಗಾಧ ಜ್ಞಾನದ ಬಗ್ಗೆ ನುಡಿದರು.

ನಂತರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ರಕ್ತದೊತ್ತಡ ತಪಾಸಣೆಯನ್ನು ಪೋಷಕರಿಗೆ ಹಾಗೂ ಶಿಕ್ಷಕರಿಗೆ ಹಮ್ಮಿಕೊಳ್ಳಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ನೆರವೇರಿಸಲಾಯಿತು.

Related posts

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya
error: Content is protected !!