23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ಮೇ 22 ರಂದು ಮಧ್ಯ ರಾತ್ರಿ ಬಳಿಕ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಕಳ್ಳತನ ನಡೆದಿರುವ ಘಟನೆ ನಡೆದಿದೆ.

ಪಲ್ಕೆ ನಿವಾಸಿ ಪ್ರೇಮ ಶೆಟ್ಟಿ ಎಂಬವರ ಮನೆಯಲ್ಲಿ ತಮ್ಮ ಮಗ ವೃದ್ಧೆ ತಾಯಿ ಜತೆ ಇರುವಾಗಲೇ ತಡರಾತ್ರಿ ಹಿಂಬದಿ ಬಾಗಿಲು ಒಡೆದು ರೂಮ್ ನಲ್ಲಿರುವ ಕಪಾಟು ಹೊಡೆದು ಸುಮಾರು 20 ಪವನ್ ಚಿನ್ನ ಇತರ ದಾಖಲೆಗಳ ಬ್ಯಾಗನ್ನೇ ಎಗರಿಸಿ ಪರಾರಿ ಯಾಗಿದ್ದಾರೆ. ಕಪಾಟಿನ ಸಮೀಪವೇ ಮನೆಮಂದಿ ಮಲಗಿದ್ದರೂ ಕಳ್ಳರು ಚಾಣಾಕ್ಷತನದಿಂದ ಕದ್ದಿದ್ದು, ಮನೆಮಂದಿಗೆ ಎಚ್ಚರವಾಗಿರಲಿಲ್ಲ.

ಪ್ರೇಮಾ ಅವರ ಮನೆಯಿಂದ ಕೇವಲ 200 ಮೀಟರ್ ಸಮೀಪದಲ್ಲಿರುವ ಕರಂಬಾರು ಗ್ರಾಮದ ಮುಂಡೆಲ್ ವಿಶ್ವನಾಥ ಶೆಟ್ಟಿಯವರ ಮನೆಯಲ್ಲು ಕಳ್ಳತನ ನಡೆಸಲಾಗಿದೆ.

ಮನೆಯವರ ಸಂಬಂಧಿಕರ ಮನೆಯಲ್ಲಿ ಕೋಲ ಇರುವ ಕಾರಣ ಸಂಜೆ ತೆರಳಿದ್ದು ಮನೆಯ ಬಾಗಿಲು ಒಡೆದು 4 ಪವನ್ ಚಿನ್ನ ಕದ್ದು ಪರಾರಿ ಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ವೇಣೂರು ಠಾಣೆ ಉಪನಿರೀಕ್ಷಕ ಶ್ರೀ ಶೈಲ ಅವರ ತಂಡ ಆಗಮಿಸಿ ತನಿಖೆ ಮುಂದುವರೆಸಿದೆ.

Related posts

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya
error: Content is protected !!