September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ಮೇ 22 ರಂದು ಮಧ್ಯ ರಾತ್ರಿ ಬಳಿಕ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಕಳ್ಳತನ ನಡೆದಿರುವ ಘಟನೆ ನಡೆದಿದೆ.

ಪಲ್ಕೆ ನಿವಾಸಿ ಪ್ರೇಮ ಶೆಟ್ಟಿ ಎಂಬವರ ಮನೆಯಲ್ಲಿ ತಮ್ಮ ಮಗ ವೃದ್ಧೆ ತಾಯಿ ಜತೆ ಇರುವಾಗಲೇ ತಡರಾತ್ರಿ ಹಿಂಬದಿ ಬಾಗಿಲು ಒಡೆದು ರೂಮ್ ನಲ್ಲಿರುವ ಕಪಾಟು ಹೊಡೆದು ಸುಮಾರು 20 ಪವನ್ ಚಿನ್ನ ಇತರ ದಾಖಲೆಗಳ ಬ್ಯಾಗನ್ನೇ ಎಗರಿಸಿ ಪರಾರಿ ಯಾಗಿದ್ದಾರೆ. ಕಪಾಟಿನ ಸಮೀಪವೇ ಮನೆಮಂದಿ ಮಲಗಿದ್ದರೂ ಕಳ್ಳರು ಚಾಣಾಕ್ಷತನದಿಂದ ಕದ್ದಿದ್ದು, ಮನೆಮಂದಿಗೆ ಎಚ್ಚರವಾಗಿರಲಿಲ್ಲ.

ಪ್ರೇಮಾ ಅವರ ಮನೆಯಿಂದ ಕೇವಲ 200 ಮೀಟರ್ ಸಮೀಪದಲ್ಲಿರುವ ಕರಂಬಾರು ಗ್ರಾಮದ ಮುಂಡೆಲ್ ವಿಶ್ವನಾಥ ಶೆಟ್ಟಿಯವರ ಮನೆಯಲ್ಲು ಕಳ್ಳತನ ನಡೆಸಲಾಗಿದೆ.

ಮನೆಯವರ ಸಂಬಂಧಿಕರ ಮನೆಯಲ್ಲಿ ಕೋಲ ಇರುವ ಕಾರಣ ಸಂಜೆ ತೆರಳಿದ್ದು ಮನೆಯ ಬಾಗಿಲು ಒಡೆದು 4 ಪವನ್ ಚಿನ್ನ ಕದ್ದು ಪರಾರಿ ಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ವೇಣೂರು ಠಾಣೆ ಉಪನಿರೀಕ್ಷಕ ಶ್ರೀ ಶೈಲ ಅವರ ತಂಡ ಆಗಮಿಸಿ ತನಿಖೆ ಮುಂದುವರೆಸಿದೆ.

Related posts

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya
error: Content is protected !!