23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ಮೇ 22 ರಂದು ಮಧ್ಯ ರಾತ್ರಿ ಬಳಿಕ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಕಳ್ಳತನ ನಡೆದಿರುವ ಘಟನೆ ನಡೆದಿದೆ.

ಪಲ್ಕೆ ನಿವಾಸಿ ಪ್ರೇಮ ಶೆಟ್ಟಿ ಎಂಬವರ ಮನೆಯಲ್ಲಿ ತಮ್ಮ ಮಗ ವೃದ್ಧೆ ತಾಯಿ ಜತೆ ಇರುವಾಗಲೇ ತಡರಾತ್ರಿ ಹಿಂಬದಿ ಬಾಗಿಲು ಒಡೆದು ರೂಮ್ ನಲ್ಲಿರುವ ಕಪಾಟು ಹೊಡೆದು ಸುಮಾರು 20 ಪವನ್ ಚಿನ್ನ ಇತರ ದಾಖಲೆಗಳ ಬ್ಯಾಗನ್ನೇ ಎಗರಿಸಿ ಪರಾರಿ ಯಾಗಿದ್ದಾರೆ. ಕಪಾಟಿನ ಸಮೀಪವೇ ಮನೆಮಂದಿ ಮಲಗಿದ್ದರೂ ಕಳ್ಳರು ಚಾಣಾಕ್ಷತನದಿಂದ ಕದ್ದಿದ್ದು, ಮನೆಮಂದಿಗೆ ಎಚ್ಚರವಾಗಿರಲಿಲ್ಲ.

ಪ್ರೇಮಾ ಅವರ ಮನೆಯಿಂದ ಕೇವಲ 200 ಮೀಟರ್ ಸಮೀಪದಲ್ಲಿರುವ ಕರಂಬಾರು ಗ್ರಾಮದ ಮುಂಡೆಲ್ ವಿಶ್ವನಾಥ ಶೆಟ್ಟಿಯವರ ಮನೆಯಲ್ಲು ಕಳ್ಳತನ ನಡೆಸಲಾಗಿದೆ.

ಮನೆಯವರ ಸಂಬಂಧಿಕರ ಮನೆಯಲ್ಲಿ ಕೋಲ ಇರುವ ಕಾರಣ ಸಂಜೆ ತೆರಳಿದ್ದು ಮನೆಯ ಬಾಗಿಲು ಒಡೆದು 4 ಪವನ್ ಚಿನ್ನ ಕದ್ದು ಪರಾರಿ ಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ವೇಣೂರು ಠಾಣೆ ಉಪನಿರೀಕ್ಷಕ ಶ್ರೀ ಶೈಲ ಅವರ ತಂಡ ಆಗಮಿಸಿ ತನಿಖೆ ಮುಂದುವರೆಸಿದೆ.

Related posts

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya
error: Content is protected !!