July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ಮೇ 22 ರಂದು ಮಧ್ಯ ರಾತ್ರಿ ಬಳಿಕ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಕಳ್ಳತನ ನಡೆದಿರುವ ಘಟನೆ ನಡೆದಿದೆ.

ಪಲ್ಕೆ ನಿವಾಸಿ ಪ್ರೇಮ ಶೆಟ್ಟಿ ಎಂಬವರ ಮನೆಯಲ್ಲಿ ತಮ್ಮ ಮಗ ವೃದ್ಧೆ ತಾಯಿ ಜತೆ ಇರುವಾಗಲೇ ತಡರಾತ್ರಿ ಹಿಂಬದಿ ಬಾಗಿಲು ಒಡೆದು ರೂಮ್ ನಲ್ಲಿರುವ ಕಪಾಟು ಹೊಡೆದು ಸುಮಾರು 20 ಪವನ್ ಚಿನ್ನ ಇತರ ದಾಖಲೆಗಳ ಬ್ಯಾಗನ್ನೇ ಎಗರಿಸಿ ಪರಾರಿ ಯಾಗಿದ್ದಾರೆ. ಕಪಾಟಿನ ಸಮೀಪವೇ ಮನೆಮಂದಿ ಮಲಗಿದ್ದರೂ ಕಳ್ಳರು ಚಾಣಾಕ್ಷತನದಿಂದ ಕದ್ದಿದ್ದು, ಮನೆಮಂದಿಗೆ ಎಚ್ಚರವಾಗಿರಲಿಲ್ಲ.

ಪ್ರೇಮಾ ಅವರ ಮನೆಯಿಂದ ಕೇವಲ 200 ಮೀಟರ್ ಸಮೀಪದಲ್ಲಿರುವ ಕರಂಬಾರು ಗ್ರಾಮದ ಮುಂಡೆಲ್ ವಿಶ್ವನಾಥ ಶೆಟ್ಟಿಯವರ ಮನೆಯಲ್ಲು ಕಳ್ಳತನ ನಡೆಸಲಾಗಿದೆ.

ಮನೆಯವರ ಸಂಬಂಧಿಕರ ಮನೆಯಲ್ಲಿ ಕೋಲ ಇರುವ ಕಾರಣ ಸಂಜೆ ತೆರಳಿದ್ದು ಮನೆಯ ಬಾಗಿಲು ಒಡೆದು 4 ಪವನ್ ಚಿನ್ನ ಕದ್ದು ಪರಾರಿ ಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ವೇಣೂರು ಠಾಣೆ ಉಪನಿರೀಕ್ಷಕ ಶ್ರೀ ಶೈಲ ಅವರ ತಂಡ ಆಗಮಿಸಿ ತನಿಖೆ ಮುಂದುವರೆಸಿದೆ.

Related posts

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya
error: Content is protected !!