23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬೆಳ್ತಂಗಡಿ : ಏಕಾ ಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಉಚ್ಚವ್ ಪುರೈ ನಿ, ಉಜ್ವ ಕಾಲಿಪ್ಪರಾ ಭರಾಯಿಚ್ ನಿವಾಸಿ ಅನಿಲ್ ಚೌಹಾಣ್ ಎಂಬವರು ಮೇ 22 ರಂದು ಅವರ ಸಂಸ್ಥೆಯ ಬಾಬ್ತು ವಾಹನದಲ್ಲಿ ಗುರುವಾಯನಕೆರೆಯಿಂದ ಉಜಿರೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಸಮಯ ಮಧ್ಯಾಹ್ನ ಬೆಳ್ತಂಗಡಿ ಕಸಬಾ ಗ್ರಾಮದ ಲೋಬೋ ಮೋಟರ್ಸ್ ಅಂಗಡಿಯ ಮುಂಭಾಗ ಬರುತ್ತಿದ್ದಂತೆ ಎಡಬದಿಯಲ್ಲಿ ನಿಂತಿದ್ದ ಅನ್ಸಿ ಅಗೇರಿಯಾ ಎಂಬಾತನು ಒಮ್ಮೆಲೆ ಏಕಾ ಎಕಿ ಪಿರ್ಯಾದಿದಾರರ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಗೆ ಬಿದ್ದಾಗ ಅಲ್ಲಿ ಸೇರಿದ ಸಾರ್ವಜನಿಕರ ಸಹಾಯದಿಂದ ಆತನನ್ನು ಎತ್ತಿ ಉಪಚರಿಸಿ ನೋಡಲಾಗಿ ಸದ್ರಿ ವ್ಯಕ್ತಿಯ ಸೊಂಟದಿಂದ ಕೆಳಗೆ ಸಂಪೂರ್ಣ ಜಖಂಗೊಂಡು ಅಸ್ವಸ್ಥನಾಗಿದ್ದವನನ್ನು ಅಲ್ಲಿ ಸೇರಿದವರು ಆಟೋ ವೊಂದರಲ್ಲಿ ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಯಲ್ಲಿರುತ್ತಾ ಫಲಕಾರಿಯಾದೆ ಸಂಜೆ ಮೃತಪಟ್ಟಿರುವುದಾಗಿ ವರದಿಯಾಗಿದೆ .

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಯು ಡಿ ಆರ್ ನಂ 22/2024 ಕಲಂ; 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya
error: Content is protected !!