24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

ಬಳಂಜ : ಹಿಂಬದಿಯಿಂದ ಬಂದು ತನ್ನನ್ನು ತಳ್ಳಿ, ಈ ಬಗ್ಗೆ ಪ್ರಶ್ನಿಸಿದಾಗ ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಬಳಂಜ ಗ್ರಾಮದ ಪ್ರಕಾಶ್ ಶೆಟ್ಟಿಯವರು ಅಶ್ವಿನ್ ಪೂಜಾರಿ ಎಂಬವರ ವಿರುದ್ಧ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕಾಶ್‌ ಶೆಟ್ಟಿ ಹಾಗೂ ಅಶ್ವಿನ್‌ ಪೂಜಾರಿ ಎಂಬಾತನಿಗೂ ಎಲೆಕ್ಟ್ರೀಷಿಯನ್ ಕೆಲಸದ ವಿಚಾರವಾಗಿ ಮನಸ್ತಾಪ ಇದ್ದು, ಮೇ 20 ರಂದು ರಾತ್ರಿ ಪ್ರಕಾಶ್ ಶೆಟ್ಟಿಯವರು ಬಳೆಂಜ ಗ್ರಾಮದಲ್ಲಿ ತನ್ನ ಪರಿಚಯಸ್ಥರ ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳಿದ್ದು, ಅದೇ ಕಾರ್ಯಕ್ರಮಕ್ಕೆ ಆಶ್ವಿನ್ ತನ್ನ ತಾಯಿಯೊಂದಿಗೆ ಬಂದಿರುತ್ತಾರೆ. ಈ ವೇಳೆ ಪ್ರಶಾಂತ್ ಪೂಜಾರಿ ರವರು ಮನೆಯ ಅಂಗಳದಲ್ಲಿ ನಿಂತಿದ್ದ ಸಮಯ, ಅಶ್ವಿನ್ ಎಂಬಾತನು ಹಿಂಬದಿಯಿಂದ ಬಂದು ತಳ್ಳಿದ್ದು, ಈ ಬಗ್ಗೆ ಪ್ರಕಾಶ್ ಶೆಟ್ಟಿ ಪ್ರಶ್ನಿಸಿದಾಗ. ಆರೋಪಿಯು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುತ್ತಾರೆ ಎಂದು ಪ್ರಕಾಶ್ ಶೆಟ್ಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.


ಹಲ್ಲೆಯಿಂದ ಗಾಯಗೊಂಡ ಪ್ರಕಾಶ್ ಶೆಟ್ಟಿಯವರು ಬೆಳ್ತಂಗಡಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ ಈ ದೂರನ್ನು ನೀಡಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 48/2024 ಕಲಂ : 341, 323,504, 506 ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya
error: Content is protected !!