September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

ಬಳಂಜ : ಹಿಂಬದಿಯಿಂದ ಬಂದು ತನ್ನನ್ನು ತಳ್ಳಿ, ಈ ಬಗ್ಗೆ ಪ್ರಶ್ನಿಸಿದಾಗ ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಬಳಂಜ ಗ್ರಾಮದ ಪ್ರಕಾಶ್ ಶೆಟ್ಟಿಯವರು ಅಶ್ವಿನ್ ಪೂಜಾರಿ ಎಂಬವರ ವಿರುದ್ಧ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕಾಶ್‌ ಶೆಟ್ಟಿ ಹಾಗೂ ಅಶ್ವಿನ್‌ ಪೂಜಾರಿ ಎಂಬಾತನಿಗೂ ಎಲೆಕ್ಟ್ರೀಷಿಯನ್ ಕೆಲಸದ ವಿಚಾರವಾಗಿ ಮನಸ್ತಾಪ ಇದ್ದು, ಮೇ 20 ರಂದು ರಾತ್ರಿ ಪ್ರಕಾಶ್ ಶೆಟ್ಟಿಯವರು ಬಳೆಂಜ ಗ್ರಾಮದಲ್ಲಿ ತನ್ನ ಪರಿಚಯಸ್ಥರ ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳಿದ್ದು, ಅದೇ ಕಾರ್ಯಕ್ರಮಕ್ಕೆ ಆಶ್ವಿನ್ ತನ್ನ ತಾಯಿಯೊಂದಿಗೆ ಬಂದಿರುತ್ತಾರೆ. ಈ ವೇಳೆ ಪ್ರಶಾಂತ್ ಪೂಜಾರಿ ರವರು ಮನೆಯ ಅಂಗಳದಲ್ಲಿ ನಿಂತಿದ್ದ ಸಮಯ, ಅಶ್ವಿನ್ ಎಂಬಾತನು ಹಿಂಬದಿಯಿಂದ ಬಂದು ತಳ್ಳಿದ್ದು, ಈ ಬಗ್ಗೆ ಪ್ರಕಾಶ್ ಶೆಟ್ಟಿ ಪ್ರಶ್ನಿಸಿದಾಗ. ಆರೋಪಿಯು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುತ್ತಾರೆ ಎಂದು ಪ್ರಕಾಶ್ ಶೆಟ್ಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.


ಹಲ್ಲೆಯಿಂದ ಗಾಯಗೊಂಡ ಪ್ರಕಾಶ್ ಶೆಟ್ಟಿಯವರು ಬೆಳ್ತಂಗಡಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ ಈ ದೂರನ್ನು ನೀಡಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 48/2024 ಕಲಂ : 341, 323,504, 506 ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!