September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ( ನಿ ) ಇದರ ಸಹಭಾಗಿತ್ವದಲ್ಲಿ ಉಜಿರೆಯ ಎಸ್. ಪಿ ಆಯಿಲು ಮಿಲ್ ಸಭಾಂಗಣದಲ್ಲಿ ಇತ್ತೀಚೆಗೆ ನಿಧನರಾದ ಶ್ರೀಯುತ ಎಂ. ತುoಗಪ್ಪ ಗೌಡ ಇವರಿಗೆ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ಜರುಗಿತು.

ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕೇರಿಮಾರು ಬಾಲಕೃಷ್ಣ ಗೌಡರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ರಂಜನ್ ಜಿ ಗೌಡ, ಮಹಿಳಾ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶಿವಕಾಂತ ಗೌಡ, ಒಕ್ಕಲಿಗರ ಸಂಘದ ಜಿಲ್ಲಾ ಸಮಿತಿ ಸದಸ್ಯ ದಾಮೋದರ ಗೌಡ ಸುರುಳಿ, ಯುವ ವೇದಿಕೆಯ ಅಧ್ಯಕ್ಷ ಅನಿಲ್ ಅಂತರ ಹಾಗೂ ಸಹಕಾರಿಯ ನಿರ್ದೇಶಕರಾದ ಜಯಂತ ಗೌಡ ಗುರಿಪಳ್ಳ, ಜಯಂತ ಗೌಡ ಓಣಿಯಾಲು, ಸಂಜೀವ ಗೌಡ ಪಾಂಚಜನ್ಯ, ಭರತ್ ಗೌಡ ಹಾನಿಬೆಟ್ಟು ಉಪಸ್ಥಿತರಿದ್ದರು.

ಒಕ್ಕಲಿಗ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿದ್ದರು. ಕೀರ್ತಿಶೇಷರಾದ ಯಂ ತುoಗಪ್ಪ ಗೌಡ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸಮಾಜದ ಗಣ್ಯರಾದ ಹೆಚ್. ರಾಮಕೃಷ್ಣ ಗೌಡ, ಸುಂದರ ಗೌಡ ಪುಡ್ಕೇತ್ತು, ವಾಮನ ಗೌಡ, ಸುರೇಶ್ ಗೌಡ ಕೂಡಿಗೆ, ದಿನೇಶ್ ಗೌಡ ಕಲ್ಲಾಜೆ, ಕೇರಿಮಾರು ಬಾಲಕೃಷ್ಣ ಗೌಡ ಇವರು ಅವರ ವ್ಯಕ್ತಿತ್ವ ಆದರ್ಶಗಳು, ಸಂಘಕ್ಕೆ ಅವರು ಸಲ್ಲಿಸಿದ ಸೇವೆಯ ಬಗ್ಗೆ ಮಾತಾಡಿ ಅವರ ಗುಣಗಾನ ಮಾಡಿ ಅವರು ತೋರಿಸಿಕೊಟ್ಟ ಆದರ್ಶಗಳನ್ನು ಪಾಲಿಸುವ ಮೂಲಕ ಅವರಿಗೆ ಗೌರವ ಸಲ್ಲಿಸುವಂತೆ ಕರೆಕೊಟ್ಟರು.

ಈ ಸಂದರ್ಭದಲ್ಲಿ ಇತ್ತೀಚೆಗೆ ನಮ್ಮನಗಲಿದ ನಮ್ಮ ಸಮಾಜದ ಸದಸ್ಯರ ಆತ್ಮಕ್ಕೆ ಚಿರಶಾಂತಿ ಕೋರಿ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಕಾರ್ಯಕ್ರಮವನ್ನು ಒಕ್ಕಲಿಗ ಸಂಘದ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.

Related posts

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!