July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಶಿಬಾಜೆ ಗ್ರಾಮದ ಪೆರ್ಲ- ಕಲ್ಲಾಜೆ ರಸ್ತೆಯ ಪತ್ತಿಮಾರ್ ಎಂಬಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ.

ಶಿಬಾಜೆ ಗ್ರಾಮದ ಕುರುಂಬು ಎಂಬಲ್ಲಿನ ಹರೀಶ್‌, ಸಕಲೇಶಪುರದ ಕೌಡಳ್ಳಿಯ ಶಿವಕುಮಾರ್, ಶಿಬಾಜೆಯ ಪತ್ತಿಮಾರ್‌ನ ಪದ್ಮನಾಭ ಬಂಧಿತರು. ಆರೋಪಿಗಳಿಂದ ಒಂದು ಸಿಂಗಲ್ ಬ್ಯಾರೆಲ್ ಬಂದೂಕು, ಮಾರುತಿ ಓಮ್ನಿ ಕಾರು ವಶಕ್ಕೆ ಪಡೆಯಲಾಗಿದೆ.

ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ರಾಜೇಶ್, ಅವಿನಾಶ್, ಶಿವಕುಮಾ‌ರ್ ಹೊಸ್ಮನಿ, ರವೀಂದ್ರ, ಬೀಟ್ ಫಾರೆಸ್ಟ‌ರ್ ನಿಂಗಪ್ಪ ಅವರಿ ಮತ್ತು ಚಾಲಕ ಕಿಶೋರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya
error: Content is protected !!