ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ

ಗುರುವಾಯನಕೆರೆ: ಶ್ರೀ ನಾಗ ರಕ್ತೇಶ್ವರಿ ಹಾಗು ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರ ಪಣೆಜಾಲು ವಿನ ಪ್ರತಿಷ್ಠ ಮಹೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ಡಿ. ವೀರೇಂದ್ರ ಹೆಗ್ಗಡೆ ಯವರು ಮಂಜೂರು ಮಾಡಿದ ರೂ. 50000 ದೇಣಿಗೆ ಹಸ್ತಾಂತರ ವನ್ನು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ದೇಣಿಗೆ ಪಡೆದುಕೊಂಡು ಮಾತನಾಡಿದ ನಾಗ ರಕ್ತೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಆನಂದ ಶೆಟ್ಟಿಯವರು ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿಗಳಾದ ಡಾ.ಡಿ . ವೀರೇಂದ್ರ ಹೆಗ್ಗಡೆಯವರು ನೀಡುವ ದೇಣಿಗೆಗಳಿಂದ ದೇವಸ್ಥಾನಗಳ ಜೀರ್ಣೋದ್ದಾರ ಕೆಲಸಗಳಿಗೆ ವೇಗ ಸಿಕ್ಕಿರುತ್ತದೆ ಹಾಗೂ ಜೀರ್ಣೋದ್ಧಾರದ ಕೆಲಸ ಕಾರ್ಯಗಳು ಅಚ್ಚುಕಟ್ಟಾಗಿ ಮಾಡಲು ಸಹಕಾರಿಯಾಗಿದೆ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೆರವು ಅನನ್ಯ ವಾಗಿದೆ ಎಂದು ಪ್ರಶಂಸಿದರು.

ಕೋಶಾಧಿಕಾರಿ ಸತೀಶ್ ಕುಲಾಲ್, ಸದಸ್ಯರಾದ ನೋಣಯ್ಯ ಗೌಡ, ಹರೀಶ್ ಗೌಡ, ಶಂಕರ ಸಪಲ್ಯ, ಸತೀಶ್ ಗೌಡ, ಒಕ್ಕೂಟದ ಅಧ್ಯಕ್ಷ ರಾದ ನಾಗೇಶ್ ಪೂಜಾರಿ, ವಲಯ ಮೇಲ್ವಿಚಾರಕ ರಾದ ಶ್ರೀಮತಿ ಯಶೋದಾ, ಸೇವಾ ಪ್ರತಿನಿಧಿ ಫೆಲ್ಸಿಟ ಉಪಸ್ಥಿತರಿದ್ದರು.

Related posts

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ–ಶಿಕ್ಷಕ ಸಭೆ

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಮೊಗ್ರು ಮುಗೇರಡ್ಕ ‘ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್’ ಬೆಳ್ಳಿಹಬ್ಬ ಪ್ರಯುಕ್ತ ‘ರಜತ ಪಥ’ ಕಾರ್ಯಕ್ರಮ

Suddi Udaya

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!