25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

ಉಜಿರೆ: “ಒಬ್ಬ ಮನುಷ್ಯ ತನ್ನ ಕಾರ್ಯದಲ್ಲಿ ಜಯ ಗಳಿಸಬೇಕಾದರೆ ಪ್ರಯತ್ನ ಅತಿ ಅಗತ್ಯ. ಜೊತೆಗೆ ಅದಕ್ಕೆ ಉತ್ತಮ ಪ್ರೋತ್ಸಾಹ ಸಿಕ್ಕಿದರೆ ಅವರು ಆ ಕೆಲಸದಲ್ಲಿ ಆದಷ್ಟು ಬೇಗ ಜಯವನ್ನು ಗಳಿಸಬಹುದು. ಹಾಗಾಗಿ ಎಲ್ಲಾ ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದು ಅತ್ಯಗತ್ಯ” ಎಂದು ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ. ಹೇಳಿದರು.

ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜಿನಲ್ಲಿ ಇಂದು (ಮೇ 24) ಆಯೋಜಿಸಲಾಗಿದ್ದ ಸ್ತ್ರೀ ಆರೋಗ್ಯ ಕುರಿತ ಮಾಹಿತಿ ಕಾರ್ಯಾಗಾರ ‘ಪ್ರತಿಬಿಂಬ’ ಉದ್ಘಾಟಿಸಿ ಅವರು ಮಾತನಾಡಿದರು. ಕಾಲೇಜು, ಎಸ್.ಡಿ.ಎಂ. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜಕಾರ್ಯ ವಿಭಾಗ ಮತ್ತು ಉಜಿರೆ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಮಾತನಾಡಿ, “ಸಂಸ್ಕಾರಯುತ ಗುಣಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಸಂಸ್ಕಾರಯುತವಾದ ಬದುಕನ್ನು ಸಾಗಿಸಬಹುದು” ಎಂದರು.

ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ಎಸ್.ಡಿ.ಎಂ. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜಕಾರ್ಯ ವಿಭಾಗ ಮುಖ್ಯಸ್ಥ ಡಾ. ರವಿಶಂಕರ್ ಕೆ. ಆರ್. ಉಪಸ್ಥಿತರಿದ್ದರು.

ಬಳಿಕ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿಯರಾದ ತೇಜಸ್ವಿನಿ, ರಕ್ಷಿತಾ, ಹರಿಣಿ, ಸ್ವಾತಿ ಮತ್ತು ಶ್ರೀನಿಧಿ ಕಾರ್ಯಾಗಾರ ನಡೆಸಿಕೊಟ್ಟರು.

Related posts

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ವೇಣೂರು: ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!