September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

ಉಜಿರೆ: ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 23 ರಂದು ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ ನಡೆಯಿತು.

ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಸರಕಾರಿ ಐಟಿಐ ಪ್ರಾಂಶುಪಾಲ ಹಾಗೂ ಬೆಳ್ತಂಗಡಿ ತಾಲೂಕು ಸಹಾಯಕ ಶಿಶಿಕ್ಷು ಸಲಹೆಗಾರ ರಮೇಶ್ ನಾಯ್ಕ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಐಟಿಐ ಶಿಕ್ಷಣ ಪೂರೈಸಿದ ಕೂಡಲೇ ಶಿಶಿಕ್ಷು ತರಬೇತಿ ಪಡೆದುಕೊಂಡು ಯಾವುದೇ ಸರಕಾರಿ, ಅರೆ ಸರಕಾರಿ ಅಥವಾ ಖಾಸಗಿ ಕಂಪೆನಿಗಳಲ್ಲಿ ಉದ್ಯೋಗಕ್ಕೆ ಹೋಗುವುದು ಉತ್ತಮ ಎಂದು ಸಲಹೆ ನೀಡಿದರು.

ಐಟಿಐ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ನ್ಯಾಪ್ಸ್ (National Apprenticeship Promotion Scheme- NAPS) ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡಾಗ ಅವರಿಗೆ ಆಯ್ದ ಕಂಪೆನಿಗಳಿಂದ ಅವರ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ಅಪ್ರಂಟಿಶಿಪ್ ತರಬೇತಿಗೆ ಅವಕಾಶ ಮಾಡಿಕೊಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಕಂಪೆನಿಗಳಲ್ಲಿ ಶಿಷ್ಯವೇತನ ನೀಡಲಾಗುತ್ತದೆ. ವರ್ಷದ ಕೊನೆಯಲ್ಲಿ ಪರೀಕ್ಷೆ ನಡೆಸಿ ಕೇಂದ್ರ ಸರಕಾರ ನೀಡಲ್ಪಟ್ಟ ಪ್ರಮಾಣಪತ್ರ ನೀಡಲಾಗುವುದು ಎಂದು ಅವರು ತಿಳಿಸಿದರು.

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಸಂಸ್ಥೆ ಕುರಿತು ಮಾತನಾಡಿದರು.

ಕಿರಿಯ ತರಬೇತಿ ಅಧಿಕಾರಿ ಶೈಲೇಶ್ ಜೆ. ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಸ್ವಾಗತಿಸಿ, ವಂದಿಸಿದರು‌.

Related posts

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಪಿಕೋತ್ಸವ ಹಾಗೂ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವದ ಸಮಾರೋಪ

Suddi Udaya

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya
error: Content is protected !!