28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಮೇಲಂತಬೆಟ್ಟು ಗ್ರಾಮದ ಮೂಡಲ ಎಂಬಲ್ಲಿ ನಡೆಯುತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡ ಮೇ.18 ರಂದು ಸಂಜೆ ದಾಳಿ ಮಾಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಮತ್ತು ಬೆಳ್ತಂಗಡಿ ತಹಶೀಲ್ದಾರ್ ನೀಡಿದ ವರದಿಯ ಆಧಾರದಲ್ಲಿ ದಕ್ಷಿಣ ಕನ್ನಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು ಮೇ.20 ರಂದು ಸ್ಥಳ ಮಹಜರು ಮಾಡಿ ಪ್ರಮೋದ್ ಗೌಡ ದಿಡುಪೆ, ಶಶಿರಾಜ್ ಶೆಟ್ಟಿ, ಸೂರಪ್ಪ ಪೂಜಾರಿ ಸೇರಿ ಮೂವರ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ಮೇ.23 ರಂದು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳು 1,571.7 ಮೆಟ್ರಿಕ್ ಟನ್ ಕಟ್ಟಡ ಕಲ್ಲು ಸ್ಪೋಟ ಮಾಡಿ ಸಾಗಾಟ ಮಾಡಿರುವುದಲ್ಲದೇ ಸುಮಾರು 65-70 ಮೆಟ್ರಿಕ್ ಟನ್ ಕಲ್ಲು ದಾಸ್ತಾನು ಮಾಡಿರುವುದು ಕಂಡು ಬಂದಿದ್ದು. ಇದರಿಂದ ಆರೋಪಿಗಳು ಅಕ್ರಮವಾಗಿ ಸರಕಾರದ ಅಮೂಲ್ಯ ಉಪಖನಿಜವಾದ ಕಲ್ಲನ್ನು ಯಾವುದೇ ಪರವಾನಿಗೆ ಇಲ್ಲದೆ ಹಾಗೂ ಸರಕಾರಕ್ಕೆ ರಾಜಸ್ವ ಸಂದಾಯ ಮಾಡದೆ ಗಣಿಗಾರಿಕೆ ಹಾಗೂ ಸಾಗಾಣಿಕೆ ಮಾಡುತ್ತಿರುವುದು ದೃಢಪಟ್ಟಿರುವುದರಿಂದ mines & minerals (development and regulation) act 1957) amendment 2015) 8 0 4,4(1A) क Karnataka minor mineral concession rules 1994 (Amendment Rules 2023) 8 2 ,42(1),43 ಮತ್ತು 44 ಗಳ ಶಿಕ್ಷೆಗೆ ಬದ್ಧರಾದ 3(1) ಅಪರಾಧವಾಗಿರುವುದು ದೃಢಪಟ್ಟಿರುತ್ತದೆ. MMDR act 1957 (Amendment 2015) 8 0 22 8 Cr.P.C200 ಅಡಿಯಲ್ಲಿ ದೂರು ನೀಡುವ ಅಧಿಕಾರ ಹೊಂದಿದ್ದು .ಅನಧಿಕೃತ ಕಟ್ಟಡ ಕಲ್ಲು ಗಣಿಗಾರಿಕೆ ವಿರುದ್ಧ ಕಾನೂನು ಕ್ರಮ ಜರುಗಿಸಿ ಶಿಕ್ಷೆ ನೀಡಬೇಕಾಗಿ ಮಾನ್ಯ ಪ್ರಧಾನ ಸಿವಿಲ್‌ ನ್ಯಾಯಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಬೆಳ್ತಂಗಡಿಗೆ ಮೇ.23 ರಂದು ದಕ್ಷಿಣ ಕನ್ನಡ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಗಿರೀಶ್ ಮೋಹನ್ ಎಸ್.ಎನ್ ದೂರು ದಾಖಲಿಸಿದ್ದಾರೆ.

Related posts

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ

Suddi Udaya

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya
error: Content is protected !!