25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

ಉಜಿರೆ: “ಒಬ್ಬ ಮನುಷ್ಯ ತನ್ನ ಕಾರ್ಯದಲ್ಲಿ ಜಯ ಗಳಿಸಬೇಕಾದರೆ ಪ್ರಯತ್ನ ಅತಿ ಅಗತ್ಯ. ಜೊತೆಗೆ ಅದಕ್ಕೆ ಉತ್ತಮ ಪ್ರೋತ್ಸಾಹ ಸಿಕ್ಕಿದರೆ ಅವರು ಆ ಕೆಲಸದಲ್ಲಿ ಆದಷ್ಟು ಬೇಗ ಜಯವನ್ನು ಗಳಿಸಬಹುದು. ಹಾಗಾಗಿ ಎಲ್ಲಾ ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದು ಅತ್ಯಗತ್ಯ” ಎಂದು ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ. ಹೇಳಿದರು.

ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜಿನಲ್ಲಿ ಇಂದು (ಮೇ 24) ಆಯೋಜಿಸಲಾಗಿದ್ದ ಸ್ತ್ರೀ ಆರೋಗ್ಯ ಕುರಿತ ಮಾಹಿತಿ ಕಾರ್ಯಾಗಾರ ‘ಪ್ರತಿಬಿಂಬ’ ಉದ್ಘಾಟಿಸಿ ಅವರು ಮಾತನಾಡಿದರು. ಕಾಲೇಜು, ಎಸ್.ಡಿ.ಎಂ. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜಕಾರ್ಯ ವಿಭಾಗ ಮತ್ತು ಉಜಿರೆ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಮಾತನಾಡಿ, “ಸಂಸ್ಕಾರಯುತ ಗುಣಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಸಂಸ್ಕಾರಯುತವಾದ ಬದುಕನ್ನು ಸಾಗಿಸಬಹುದು” ಎಂದರು.

ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ಎಸ್.ಡಿ.ಎಂ. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜಕಾರ್ಯ ವಿಭಾಗ ಮುಖ್ಯಸ್ಥ ಡಾ. ರವಿಶಂಕರ್ ಕೆ. ಆರ್. ಉಪಸ್ಥಿತರಿದ್ದರು.

ಬಳಿಕ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿಯರಾದ ತೇಜಸ್ವಿನಿ, ರಕ್ಷಿತಾ, ಹರಿಣಿ, ಸ್ವಾತಿ ಮತ್ತು ಶ್ರೀನಿಧಿ ಕಾರ್ಯಾಗಾರ ನಡೆಸಿಕೊಟ್ಟರು.

Related posts

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

Suddi Udaya

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya

ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ

Suddi Udaya
error: Content is protected !!