September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

ಉಜಿರೆ: ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 23 ರಂದು ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ ನಡೆಯಿತು.

ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಸರಕಾರಿ ಐಟಿಐ ಪ್ರಾಂಶುಪಾಲ ಹಾಗೂ ಬೆಳ್ತಂಗಡಿ ತಾಲೂಕು ಸಹಾಯಕ ಶಿಶಿಕ್ಷು ಸಲಹೆಗಾರ ರಮೇಶ್ ನಾಯ್ಕ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಐಟಿಐ ಶಿಕ್ಷಣ ಪೂರೈಸಿದ ಕೂಡಲೇ ಶಿಶಿಕ್ಷು ತರಬೇತಿ ಪಡೆದುಕೊಂಡು ಯಾವುದೇ ಸರಕಾರಿ, ಅರೆ ಸರಕಾರಿ ಅಥವಾ ಖಾಸಗಿ ಕಂಪೆನಿಗಳಲ್ಲಿ ಉದ್ಯೋಗಕ್ಕೆ ಹೋಗುವುದು ಉತ್ತಮ ಎಂದು ಸಲಹೆ ನೀಡಿದರು.

ಐಟಿಐ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ನ್ಯಾಪ್ಸ್ (National Apprenticeship Promotion Scheme- NAPS) ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡಾಗ ಅವರಿಗೆ ಆಯ್ದ ಕಂಪೆನಿಗಳಿಂದ ಅವರ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ಅಪ್ರಂಟಿಶಿಪ್ ತರಬೇತಿಗೆ ಅವಕಾಶ ಮಾಡಿಕೊಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಕಂಪೆನಿಗಳಲ್ಲಿ ಶಿಷ್ಯವೇತನ ನೀಡಲಾಗುತ್ತದೆ. ವರ್ಷದ ಕೊನೆಯಲ್ಲಿ ಪರೀಕ್ಷೆ ನಡೆಸಿ ಕೇಂದ್ರ ಸರಕಾರ ನೀಡಲ್ಪಟ್ಟ ಪ್ರಮಾಣಪತ್ರ ನೀಡಲಾಗುವುದು ಎಂದು ಅವರು ತಿಳಿಸಿದರು.

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಸಂಸ್ಥೆ ಕುರಿತು ಮಾತನಾಡಿದರು.

ಕಿರಿಯ ತರಬೇತಿ ಅಧಿಕಾರಿ ಶೈಲೇಶ್ ಜೆ. ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಸ್ವಾಗತಿಸಿ, ವಂದಿಸಿದರು‌.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya
error: Content is protected !!