22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

ಉಜಿರೆ: ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 23 ರಂದು ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ ನಡೆಯಿತು.

ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಸರಕಾರಿ ಐಟಿಐ ಪ್ರಾಂಶುಪಾಲ ಹಾಗೂ ಬೆಳ್ತಂಗಡಿ ತಾಲೂಕು ಸಹಾಯಕ ಶಿಶಿಕ್ಷು ಸಲಹೆಗಾರ ರಮೇಶ್ ನಾಯ್ಕ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಐಟಿಐ ಶಿಕ್ಷಣ ಪೂರೈಸಿದ ಕೂಡಲೇ ಶಿಶಿಕ್ಷು ತರಬೇತಿ ಪಡೆದುಕೊಂಡು ಯಾವುದೇ ಸರಕಾರಿ, ಅರೆ ಸರಕಾರಿ ಅಥವಾ ಖಾಸಗಿ ಕಂಪೆನಿಗಳಲ್ಲಿ ಉದ್ಯೋಗಕ್ಕೆ ಹೋಗುವುದು ಉತ್ತಮ ಎಂದು ಸಲಹೆ ನೀಡಿದರು.

ಐಟಿಐ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ನ್ಯಾಪ್ಸ್ (National Apprenticeship Promotion Scheme- NAPS) ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡಾಗ ಅವರಿಗೆ ಆಯ್ದ ಕಂಪೆನಿಗಳಿಂದ ಅವರ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ಅಪ್ರಂಟಿಶಿಪ್ ತರಬೇತಿಗೆ ಅವಕಾಶ ಮಾಡಿಕೊಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಕಂಪೆನಿಗಳಲ್ಲಿ ಶಿಷ್ಯವೇತನ ನೀಡಲಾಗುತ್ತದೆ. ವರ್ಷದ ಕೊನೆಯಲ್ಲಿ ಪರೀಕ್ಷೆ ನಡೆಸಿ ಕೇಂದ್ರ ಸರಕಾರ ನೀಡಲ್ಪಟ್ಟ ಪ್ರಮಾಣಪತ್ರ ನೀಡಲಾಗುವುದು ಎಂದು ಅವರು ತಿಳಿಸಿದರು.

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಸಂಸ್ಥೆ ಕುರಿತು ಮಾತನಾಡಿದರು.

ಕಿರಿಯ ತರಬೇತಿ ಅಧಿಕಾರಿ ಶೈಲೇಶ್ ಜೆ. ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಸ್ವಾಗತಿಸಿ, ವಂದಿಸಿದರು‌.

Related posts

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಂ. ವೀರಪ್ಪ ಮೊಯ್ಲಿ

Suddi Udaya
error: Content is protected !!