ಬಳಂಜ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ವಸಂತ ಬಂಗೇರರಿಗೆ ಬಳಂಜ ಅಭಿಮಾನಿ ಬಳಗದಿಂದ ಸಾರ್ವಜನಿಕ ನುಡಿನಮನ ಕಾರ್ಯಕ್ರಮವನ್ನು ಮೇ 23 ರಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು.
ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿ, ತಾಲೂಕಿನ ಅಭಿವೃದ್ಧಿಗೆ ಸಹಕಾರ ನೀಡಿ, ತನ್ನ ಜೀವನದ್ದಕ್ಕೂ ಮಾನವೀಯತೆ ಮತ್ತು ಪ್ರಾಮಾಣಿಕತೆಯನ್ನು ಅಳವಡಿಸಿ ಕಷ್ಟವೆಂದು ಬಂದವರ ನಿಜ ಅರ್ಥದ ಜನಸೇವಕ ವಸಂತ ಬಂಗೇರರು. ಬಂಗೇರರು ಬರಿ ರಾಜಕಾರಣಿ ಮಾತ್ರವಲ್ಲ ಬಂಗೇರ ಎಂದರೆ ಭರವಸೆ, ನಂಬಿಕೆ, ಶಕ್ತಿ ಎಂದು ತಾ.ಪಂ. ಮಾಜಿ ಸದಸ್ಯ ಹೆಚ್. ಧರ್ಣಪ್ಪ ಪೂಜಾರಿ ನುಡಿನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ತಿಮ್ಮಪ್ಪ ಪೂಜಾರಿ ತಾರಿಪಡ್ಪು, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್, ಹಿರಯರಾದ ಉಸ್ಮಾನ್ ಬಳಂಜ, ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕರಾದ ಹೆಚ್. ದೇಜಪ್ಪ ಪೂಜಾರಿ, ದಿನೇಶ್ ಪಿ.ಕೆ, ಬಳಂಜ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ಪಿ.ಕೆ, ಬಳಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ವಿಕ್ಟರ್ ಕ್ರಾಸ್ತ, ಪಂಚಾಯತ್ ಸದಸ್ಯರಾದ ರವೀಂದ್ರ ಬಿ ಅಮೀನ್, ಪ್ರಮುಖರಾದ ಯೋಗೀಶ್ ಪೂಜಾರಿ ಯೈಕುರಿ, ರಮಾನಾಥ್ ಶೆಟ್ಟಿ, ಪುರಂದರ ಪೂಜಾರಿ, ರಂಜಿತ್ ಪೂಜಾರಿ, ಪ್ರದೀಪ್ ಕಾಪಿನಡ್ಕ, ಹಾಗೂ ಬಳಂಜ, ನಾಲ್ಕೂರು, ತೆಂಕಕಾರಂದೂರು ಗ್ರಾಮದ ಅಭಿಮಾನಿಗಳು ಭಾಗವಹಿಸಿ, ನುಡಿನಮನ ಸಲ್ಲಿಸಿದರು.











