July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಮೇಲಂತಬೆಟ್ಟು ಗ್ರಾಮದ ಮೂಡಲ ಎಂಬಲ್ಲಿ ನಡೆಯುತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡ ಮೇ.18 ರಂದು ಸಂಜೆ ದಾಳಿ ಮಾಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಮತ್ತು ಬೆಳ್ತಂಗಡಿ ತಹಶೀಲ್ದಾರ್ ನೀಡಿದ ವರದಿಯ ಆಧಾರದಲ್ಲಿ ದಕ್ಷಿಣ ಕನ್ನಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು ಮೇ.20 ರಂದು ಸ್ಥಳ ಮಹಜರು ಮಾಡಿ ಪ್ರಮೋದ್ ಗೌಡ ದಿಡುಪೆ, ಶಶಿರಾಜ್ ಶೆಟ್ಟಿ, ಸೂರಪ್ಪ ಪೂಜಾರಿ ಸೇರಿ ಮೂವರ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ಮೇ.23 ರಂದು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳು 1,571.7 ಮೆಟ್ರಿಕ್ ಟನ್ ಕಟ್ಟಡ ಕಲ್ಲು ಸ್ಪೋಟ ಮಾಡಿ ಸಾಗಾಟ ಮಾಡಿರುವುದಲ್ಲದೇ ಸುಮಾರು 65-70 ಮೆಟ್ರಿಕ್ ಟನ್ ಕಲ್ಲು ದಾಸ್ತಾನು ಮಾಡಿರುವುದು ಕಂಡು ಬಂದಿದ್ದು. ಇದರಿಂದ ಆರೋಪಿಗಳು ಅಕ್ರಮವಾಗಿ ಸರಕಾರದ ಅಮೂಲ್ಯ ಉಪಖನಿಜವಾದ ಕಲ್ಲನ್ನು ಯಾವುದೇ ಪರವಾನಿಗೆ ಇಲ್ಲದೆ ಹಾಗೂ ಸರಕಾರಕ್ಕೆ ರಾಜಸ್ವ ಸಂದಾಯ ಮಾಡದೆ ಗಣಿಗಾರಿಕೆ ಹಾಗೂ ಸಾಗಾಣಿಕೆ ಮಾಡುತ್ತಿರುವುದು ದೃಢಪಟ್ಟಿರುವುದರಿಂದ mines & minerals (development and regulation) act 1957) amendment 2015) 8 0 4,4(1A) क Karnataka minor mineral concession rules 1994 (Amendment Rules 2023) 8 2 ,42(1),43 ಮತ್ತು 44 ಗಳ ಶಿಕ್ಷೆಗೆ ಬದ್ಧರಾದ 3(1) ಅಪರಾಧವಾಗಿರುವುದು ದೃಢಪಟ್ಟಿರುತ್ತದೆ. MMDR act 1957 (Amendment 2015) 8 0 22 8 Cr.P.C200 ಅಡಿಯಲ್ಲಿ ದೂರು ನೀಡುವ ಅಧಿಕಾರ ಹೊಂದಿದ್ದು .ಅನಧಿಕೃತ ಕಟ್ಟಡ ಕಲ್ಲು ಗಣಿಗಾರಿಕೆ ವಿರುದ್ಧ ಕಾನೂನು ಕ್ರಮ ಜರುಗಿಸಿ ಶಿಕ್ಷೆ ನೀಡಬೇಕಾಗಿ ಮಾನ್ಯ ಪ್ರಧಾನ ಸಿವಿಲ್‌ ನ್ಯಾಯಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಬೆಳ್ತಂಗಡಿಗೆ ಮೇ.23 ರಂದು ದಕ್ಷಿಣ ಕನ್ನಡ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಗಿರೀಶ್ ಮೋಹನ್ ಎಸ್.ಎನ್ ದೂರು ದಾಖಲಿಸಿದ್ದಾರೆ.

Related posts

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ: ವರಕಬೆ ಬಳಿ ಕಾರುಗಳು ಹಾಗೂ ಬೈಕ್ ನಡುವೆ ಸರಣಿ ಅಪಘಾತ

Suddi Udaya

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!