25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

ಉಜಿರೆ: ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 23 ರಂದು ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ ನಡೆಯಿತು.

ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಸರಕಾರಿ ಐಟಿಐ ಪ್ರಾಂಶುಪಾಲ ಹಾಗೂ ಬೆಳ್ತಂಗಡಿ ತಾಲೂಕು ಸಹಾಯಕ ಶಿಶಿಕ್ಷು ಸಲಹೆಗಾರ ರಮೇಶ್ ನಾಯ್ಕ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಐಟಿಐ ಶಿಕ್ಷಣ ಪೂರೈಸಿದ ಕೂಡಲೇ ಶಿಶಿಕ್ಷು ತರಬೇತಿ ಪಡೆದುಕೊಂಡು ಯಾವುದೇ ಸರಕಾರಿ, ಅರೆ ಸರಕಾರಿ ಅಥವಾ ಖಾಸಗಿ ಕಂಪೆನಿಗಳಲ್ಲಿ ಉದ್ಯೋಗಕ್ಕೆ ಹೋಗುವುದು ಉತ್ತಮ ಎಂದು ಸಲಹೆ ನೀಡಿದರು.

ಐಟಿಐ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ನ್ಯಾಪ್ಸ್ (National Apprenticeship Promotion Scheme- NAPS) ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡಾಗ ಅವರಿಗೆ ಆಯ್ದ ಕಂಪೆನಿಗಳಿಂದ ಅವರ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ಅಪ್ರಂಟಿಶಿಪ್ ತರಬೇತಿಗೆ ಅವಕಾಶ ಮಾಡಿಕೊಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಕಂಪೆನಿಗಳಲ್ಲಿ ಶಿಷ್ಯವೇತನ ನೀಡಲಾಗುತ್ತದೆ. ವರ್ಷದ ಕೊನೆಯಲ್ಲಿ ಪರೀಕ್ಷೆ ನಡೆಸಿ ಕೇಂದ್ರ ಸರಕಾರ ನೀಡಲ್ಪಟ್ಟ ಪ್ರಮಾಣಪತ್ರ ನೀಡಲಾಗುವುದು ಎಂದು ಅವರು ತಿಳಿಸಿದರು.

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಸಂಸ್ಥೆ ಕುರಿತು ಮಾತನಾಡಿದರು.

ಕಿರಿಯ ತರಬೇತಿ ಅಧಿಕಾರಿ ಶೈಲೇಶ್ ಜೆ. ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಸ್ವಾಗತಿಸಿ, ವಂದಿಸಿದರು‌.

Related posts

ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಆರಂಭ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

Suddi Udaya

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya
error: Content is protected !!