23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

ಉಜಿರೆ: ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 23 ರಂದು ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ ನಡೆಯಿತು.

ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಸರಕಾರಿ ಐಟಿಐ ಪ್ರಾಂಶುಪಾಲ ಹಾಗೂ ಬೆಳ್ತಂಗಡಿ ತಾಲೂಕು ಸಹಾಯಕ ಶಿಶಿಕ್ಷು ಸಲಹೆಗಾರ ರಮೇಶ್ ನಾಯ್ಕ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಐಟಿಐ ಶಿಕ್ಷಣ ಪೂರೈಸಿದ ಕೂಡಲೇ ಶಿಶಿಕ್ಷು ತರಬೇತಿ ಪಡೆದುಕೊಂಡು ಯಾವುದೇ ಸರಕಾರಿ, ಅರೆ ಸರಕಾರಿ ಅಥವಾ ಖಾಸಗಿ ಕಂಪೆನಿಗಳಲ್ಲಿ ಉದ್ಯೋಗಕ್ಕೆ ಹೋಗುವುದು ಉತ್ತಮ ಎಂದು ಸಲಹೆ ನೀಡಿದರು.

ಐಟಿಐ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ನ್ಯಾಪ್ಸ್ (National Apprenticeship Promotion Scheme- NAPS) ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡಾಗ ಅವರಿಗೆ ಆಯ್ದ ಕಂಪೆನಿಗಳಿಂದ ಅವರ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ಅಪ್ರಂಟಿಶಿಪ್ ತರಬೇತಿಗೆ ಅವಕಾಶ ಮಾಡಿಕೊಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಕಂಪೆನಿಗಳಲ್ಲಿ ಶಿಷ್ಯವೇತನ ನೀಡಲಾಗುತ್ತದೆ. ವರ್ಷದ ಕೊನೆಯಲ್ಲಿ ಪರೀಕ್ಷೆ ನಡೆಸಿ ಕೇಂದ್ರ ಸರಕಾರ ನೀಡಲ್ಪಟ್ಟ ಪ್ರಮಾಣಪತ್ರ ನೀಡಲಾಗುವುದು ಎಂದು ಅವರು ತಿಳಿಸಿದರು.

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಸಂಸ್ಥೆ ಕುರಿತು ಮಾತನಾಡಿದರು.

ಕಿರಿಯ ತರಬೇತಿ ಅಧಿಕಾರಿ ಶೈಲೇಶ್ ಜೆ. ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಸ್ವಾಗತಿಸಿ, ವಂದಿಸಿದರು‌.

Related posts

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya
error: Content is protected !!