ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರಿಗೆ ಸನ್ಮಾನ

Suddi Udaya

ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಕ್ಯಾನ್ ಫಿನ್ ಹೋಮ್ಸ್ ಸಂಸ್ಥೆ ಬೆಂಗಳೂರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಮಹತ್ತರವಾದ ಸಹಕಾರ ನೀಡಿದ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಮತ್ತು ರಾಜೇಶ್ ಪೈ ಅವರನ್ನು ಶಾಲೆಯ ಅಧ್ಯಾಪಕ ವೃಂದದವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

Leave a Comment

error: Content is protected !!