25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಆಶ್ರಯದಲ್ಲಿ ಕಳೆಂಜ ಗ್ರಾಮದ ಬಂಡೇರಿಯಲ್ಲಿ ನಡೆಸಲ್ಪಡುತ್ತಿರುವ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’, ‘ಗೋನಂದಾರತಿ’ ಹಾಗೂ ಇದಕ್ಕೆ ಪೂರ್ವಭಾವಿಯಾಗಿ ನಡೆದ ‘ಗೋಗ್ರಾಸ ಹೊರೆಕಾಣಿಕೆ ಶೋಭಾಯಾತ್ರೆ” ಯ ಕಾರ್ಯಕ್ರಮಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ರೂ. 5,00,000/- ಅನುದಾನದ ಮೊತ್ತದ ಡಿ.ಡಿ. ಯನ್ನು ಮೇ 25 ರಂದು ಶ್ರೀಕ್ಷೇತ್ರದ ಪರವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣರವರು ಟ್ರಸ್ಟ್‌ ನ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಇಂಜಿನೀಯರ್ ಸುರೇಶ್, ಕಳೆಂಜ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಉಮೇಶ್, ಕಳೆಂಜ ಗ್ರಾಮದ ಸೇವಾ ಪ್ರತಿನಿಧಿ ಜನಾರ್ದನ್, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಅಧ್ಯಕ್ಷ ಡಾ| ಎಂ.ಎಂ. ದಯಾಕರ್, ಟ್ರಸ್ಟ್‌ನ ಕಾರ್ಯದರ್ಶಿ ಸುಬ್ರಹ್ಮಣ್ಯ ಕುಮಾರ್ ಅಗರ್ತ, ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿಯ ಪದಾಧಿಕಾರಿಗಳಾದ ರಮೇಶ್ ಪೂಜಾರಿ, ಕುಮಾರನಾಥ ಶೆಟ್ಟಿ ಕಲ್ಮಂಜ, ರಾಘವೇಂದ್ರ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಗೋಶಾಲೆಗೆ ನೀಡಿದ ಅನುದಾನಕ್ಕಾಗಿ ಟ್ರಸ್ಟ್ ವತಿಯಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗೌರವಪೂರ್ವಕ ಕೃತಜ್ಞತೆಗಳನ್ನು ಅರ್ಪಿಸಿದರು..

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya
error: Content is protected !!