23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಆಶ್ರಯದಲ್ಲಿ ಕಳೆಂಜ ಗ್ರಾಮದ ಬಂಡೇರಿಯಲ್ಲಿ ನಡೆಸಲ್ಪಡುತ್ತಿರುವ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’, ‘ಗೋನಂದಾರತಿ’ ಹಾಗೂ ಇದಕ್ಕೆ ಪೂರ್ವಭಾವಿಯಾಗಿ ನಡೆದ ‘ಗೋಗ್ರಾಸ ಹೊರೆಕಾಣಿಕೆ ಶೋಭಾಯಾತ್ರೆ” ಯ ಕಾರ್ಯಕ್ರಮಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ರೂ. 5,00,000/- ಅನುದಾನದ ಮೊತ್ತದ ಡಿ.ಡಿ. ಯನ್ನು ಮೇ 25 ರಂದು ಶ್ರೀಕ್ಷೇತ್ರದ ಪರವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣರವರು ಟ್ರಸ್ಟ್‌ ನ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಇಂಜಿನೀಯರ್ ಸುರೇಶ್, ಕಳೆಂಜ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಉಮೇಶ್, ಕಳೆಂಜ ಗ್ರಾಮದ ಸೇವಾ ಪ್ರತಿನಿಧಿ ಜನಾರ್ದನ್, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಅಧ್ಯಕ್ಷ ಡಾ| ಎಂ.ಎಂ. ದಯಾಕರ್, ಟ್ರಸ್ಟ್‌ನ ಕಾರ್ಯದರ್ಶಿ ಸುಬ್ರಹ್ಮಣ್ಯ ಕುಮಾರ್ ಅಗರ್ತ, ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿಯ ಪದಾಧಿಕಾರಿಗಳಾದ ರಮೇಶ್ ಪೂಜಾರಿ, ಕುಮಾರನಾಥ ಶೆಟ್ಟಿ ಕಲ್ಮಂಜ, ರಾಘವೇಂದ್ರ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಗೋಶಾಲೆಗೆ ನೀಡಿದ ಅನುದಾನಕ್ಕಾಗಿ ಟ್ರಸ್ಟ್ ವತಿಯಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗೌರವಪೂರ್ವಕ ಕೃತಜ್ಞತೆಗಳನ್ನು ಅರ್ಪಿಸಿದರು..

Related posts

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya
error: Content is protected !!