25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

ಧರ್ಮಸ್ಥಳ: ವೃಷಭ ಮಾಸದ ಹತ್ತನೇ ದಿನ ಪತ್ತನಾಜೆ (ಹತ್ತನಾವಧಿ)  ಮೇ 24 ರಂದು   ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ   ವರ್ಷದ ಉತ್ಸವ,ವಿಶೇಷ ಸೇವೆಗಳು  ಸಮಾಪ್ತಿಗೊಳ್ಳುವ  ಸಂಭ್ರಮದ ಪರ್ವ. . ಮೇ 24 ರಂದು  ಪತ್ತನಾಜೆ ಪ್ರಯುಕ್ತ  ಶ್ರೀ ದೇವರ ಸನ್ನಿಧಿಯಲ್ಲಿ  ಧರ್ಮಾಧಿಕಾರಿ ಡಾ!ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ರಂಗ ಪೂಜೆ, ಬಲಿ ಉತ್ಸವ, ವಸಂತ ಮಂಟಪದಲ್ಲಿ ಕಟ್ಟೆಪೂಜೆ,  ಅಷ್ಟಾವಧಾನ ಸೇವೆ ಹಾಗೂ   ಧ್ವಜ ಮರ ಇಳಿಸುವ ಕಾರ್ಯಕ್ರಮದೊಂದಿಗೆ ವಿಶೇಷ ಉತ್ಸವ, ಸೇವೆಗಳು ಸಮಾಪನ ಗೊಂಡವು. ಮುಂದಿನ ದೀಪಾವಳಿ ವೇಳೆಗೆ ಮತ್ತೆ  ಎಂದಿನಂತೆ ಉತ್ಸವ, ವಿಶೇಷ ಸೇವೆಗಳು ಪ್ರಾರಂಭಗೊಳ್ಳುತ್ತವೆ.                       

 ಕ್ಷೇತ್ರದ ಶ್ರೀ  ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ವಾರ್ಷಿಕ ತಿರುಗಾಟ   ಸಮಾಪ್ತಿಗೊಳಿಸಿ ಬೆಳಿಗ್ಗೆ ಮೇಳದ ಶ್ರೀ ಮಹಾಗಣಪತಿ ದೇವರನ್ನು ಹಿಂದಿನ ದಿನದ   ಮುಂಡಾಜೆ ಕ್ಯಾಂಪಿನಿಂದ  ಧರ್ಮಸ್ಥಳದ  ಮಂಜುಕೃಪಾ ಕ್ಕೆ  ಬರಮಾಡಿಕೊಂಡು  ಅಲ್ಲಿ ಮದ್ಯಾಹ್ನ ಗಣಹೋಮ,ಮಹಾಪೂಜೆ ನಡೆಯಿತು. ಮೇಳದ ಯಜಮಾನ ಡಿ.ಹರ್ಷೇನ್ದ್ರಕುಮಾರ್ ಅವರ ನೇತೃತ್ವದಲ್ಲಿ    ಸಂಜೆ ವೈಭವದ ಮೆರವಣಿಗೆಯಲ್ಲಿ ಕ್ಷೇತ್ರದ ಸಕಲ ಗೌರವ,ಬಸವ,ಆನೆಗಳು, ಚೆಂಡೆ ತಾಳ ಮೇಳ,ವಾದ್ಯ ಬ್ಯಾಂಡ್ ವಾ ದನದೊಂದಿಗೆ   ಶ್ರೀ ಮಹಾಗಣಪತಿ ದೇವರನ್ನು   ಅರ್ಚಕರ ನೃತ್ಯ ಸೇವೆಯೊಂದಿಗೆ ಬರಮಾಡಿಕೊಳ್ಳಲಾಯಿತು . ಶ್ರೀ ದೇವಳದ ಎದುರು ಮತ್ತು ಬೀಡಿನ ಮುಂಭಾಗದಲ್ಲಿ ನರ್ತನ ಸೇವೆ ನಡೆಸಿ   ಶ್ರೀ ದೇವರನ್ನು  ಛತ್ರ ಗಣಪತಿ  ಗುಡಿಯಲ್ಲಿರಿಸಿ ಪೂಜಿಸಲಾಯಿತು .         

 ಪತ್ತನಾಜೆ ಪ್ರಯುಕ್ತ   ಮೇಳಕ್ಕೆ  ರಜೆಯಾಗಿದ್ದು  ಮುಂದಿನ ಮೂರು ದಿನಗಳ ಕಾಲ ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ  ಮೇಳ ಹಾಗು ಸೇವಾಕರ್ತರ ಸೇವೆಯಾಟದೊಂದಿಗೆ  ವಾರ್ಷಿಕ ತಿರುಗಾಟಕ್ಕೆ ಮಂಗಳ ಹಾಡಲಾಗುತ್ತದೆ.                                                                                       

 ಹೇಮಾವತಿ ಹೆಗ್ಗಡೆ, ಸುಪ್ರಿಯಾ ಹರ್ಷೇನ್ದ್ರಕುಮಾರ್, ಹೆಗ್ಗಡೆ ಕುಟುಂಬಸ್ಥರು,  ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ಸೀತಾರಾಮ ತೋಳ್ಪಡಿತ್ತಾಯ, ಮಣೆಗಾರ್ ವಸಂತ ಮಂಜಿತ್ತಾಯ,  ಪಾ ರುಪತ್ಯದಾರ  ಲಕ್ಷ್ಮೀನಾರಾಯಣ ರಾವ್,  ಬಿ.ಭುಜಬಲಿ ,ಉಜಿರೆ  ಅಶೋಕ ಭಟ್,  ಕ್ಷೇತ್ರದ ಸಿಬಂದಿ ವರ್ಗ, ಊರ ಪರಊರ ಭಕ್ತಾದಿಗಳು  ಸಂಭ್ರಮದ ಮೆ ರವಣಿಗೆಯಲ್ಲಿ ಭಾಗವಹಿಸಿದ್ದರು.

Related posts

ಉಜಿರೆ ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಪೌರತ್ವ ತರಬೇತಿ ಶಿಬಿರ ಸಮಾರೋಪ ಸಮಾರಂಭ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya
error: Content is protected !!