25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಮಡಂತ್ಯಾರು: ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಇವರ ಸಾರಥ್ಯದಲ್ಲಿ ಭಜನಾ ತಂಡದ ಭಜಕ ವಿದ್ಯಾರ್ಥಿಗಳಿಗೆ 4ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ದೇವಳದ ಪ್ರಧಾನ ಅರ್ಚಕ ಟಿ.ವಿ. ಶ್ರೀಧರ ರಾವ್ ಪೇಜಾವರ ಮತ್ತು ದೇವಳದ ಮಾಜಿ ಆಡಳಿತ ಮೊಕ್ತೆಸರರಾದ ವಿಠಲ್ ಶೆಟ್ಟಿ ಮೂಡಾಯೂರು, ಭಜನಾ ತಂಡದ ಗೌರವಾಧ್ಯಕ್ಷರಾದ ಯೋಗೀಶ್ ಹೆಗ್ಡೆ, ಗೌರವ ಸಲಹೆಗಾರರಾದ ಪ್ರಶಾಂತ್ ಎಮ್, ಅಧ್ಯಕ್ಷರಾದ‌ ಪ್ರವೀಣ್ ಹೆಗ್ಡೆ, ಕಾರ್ಯದರ್ಶಿ ದೀರಜ್, ಹಾಗೂ ತಂಡದ ಮಾಜಿ ಅಧ್ಯಕ್ಷ ದಯಾನಂದ ಪೂಜಾರಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಭಜನೆ, ವಿದ್ಯೆ, ಸಂಸ್ಕ್ರತಿ – ಸಂಸ್ಕಾರಗಳ ಬಗ್ಗೆ ಭಜಕರಿಗೆ ಮಾಹಿತಿ ಮತ್ತು ಸಲಹೆ ನೀಡಿದರು. ಭಜನಾ ತಂಡದ ಸರ್ವಸದಸ್ಯರ ಉಪಸ್ಥಿತಿಯಲ್ಲಿ ತಂಡದಲ್ಲಿರುವ 45ಕ್ಕೂ ಅಧಿಕ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

Related posts

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಂದಾರು : ಪೆರ್ಲ -ಬೈಪಾಡಿಯಲ್ಲಿ ನೂತನ ಶಾಖಾ ಅಂಚೆ ಕಚೇರಿ ಉದ್ಘಾಟನೆ

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಇತಿಹಾಸ ಪ್ರಸಿದ್ಧ ಶಿಶಿಲ ಜಾತ್ರೆಗೆ ಚಾಲನೆ-ಗೊನೆ ಮುಹೂರ್ತ

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya
error: Content is protected !!