September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕಲ್ಮಂಜ : ಮಹಿಳೆಯು ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ ಯುನಿಟಿ ಬ್ಯಾಗ್ ನಲ್ಲಿ ಇರಿಸಿದ್ದ ಚಿನ್ನಾಭರಣಗಳ ಕಳವುಗೊಂಡಿರುವ ಬಗ್ಗೆ ಮೇ 23 ರಂದು ವರದಿಯಾಗಿದೆ.

ಕಲ್ಮಂಜ ಗ್ರಾಮದ ನಿಡಿಗಲ್ ಆರ್ದಶ ನಗರ ನಿವಾಸಿ ಶಶಿಕಲ ಎಂಬುವವರ ದೂರಿನಂತೆ, ಮೇ 23 ರಂದು ಬೆಳಗ್ಗೆ, ಶಶಿಕಲಾರವರು ಯುನಿಟಿ ಬ್ಯಾಗ್ನಲ್ಲಿ ತವರು ಮನೆಯವರು ಹಾಗೂ ಗಂಡನ ಮನೆಯವರು ಉಡುಗೊರೆಯಾಗಿ ನೀಡಿದ ವಿವಿಧ ಶೈಲಿಯ ವಿವಿಧ ಮಾದರಿಯ ಒಟ್ಟು 45 ಗ್ರಾಂ ಚಿನ್ನಾಭರಣಗಳನ್ನು ಇರಿಸಿಕೊಂಡು, ಪತಿ ಮತ್ತು ಚಿಕ್ಕ ಮಗುವಿನ ಜೊತೆಯಲ್ಲಿ ಕಲ್ಲಡ್ಕದಿಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಬಂದು, ಬಿ ಸಿ ರೋಡ್ ಬಸ್ಸಿನಿಂದ ಇಳಿದಿರುತ್ತಾರೆ. ಬಳಿಕ ರಸ್ತೆದಾಟಿ ಬಿ ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಸ್ವೀಟ್ಸ್ ಅಂಗಡಿಗೆ ತೆರಳಿದ್ದು, ಈ ವೇಳೆ ಸದ್ರಿಯವರ ಬ್ಯಾಗಲ್ಲಿ ಚಿನ್ನಾಭರಣಗಳಿರುತ್ತದೆ. ಸ್ವಲ್ಪ‌ ಸಮಯದ ಬಳಿಕ, ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ, ಶಶಿಕಲಾ ರವರ ಬ್ಯಾಗಲ್ಲಿದ್ದ 45 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುತ್ತದೆ. ಅವುಗಳ ಅಂದಾಜು ಮೌಲ್ಯ ರೂ. 2 ಲಕ್ಷ ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿ, ಅ.ಕ್ರ: 91/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಸಿಬ್ಬಂದಿ ಸ್ಪಂದನಾ ಎಮ್.ಎಸ್. ರವರಿಗೆ ಬೀಳ್ಕೊಡುಗೆ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya
error: Content is protected !!