30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕಲ್ಮಂಜ : ಮಹಿಳೆಯು ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ ಯುನಿಟಿ ಬ್ಯಾಗ್ ನಲ್ಲಿ ಇರಿಸಿದ್ದ ಚಿನ್ನಾಭರಣಗಳ ಕಳವುಗೊಂಡಿರುವ ಬಗ್ಗೆ ಮೇ 23 ರಂದು ವರದಿಯಾಗಿದೆ.

ಕಲ್ಮಂಜ ಗ್ರಾಮದ ನಿಡಿಗಲ್ ಆರ್ದಶ ನಗರ ನಿವಾಸಿ ಶಶಿಕಲ ಎಂಬುವವರ ದೂರಿನಂತೆ, ಮೇ 23 ರಂದು ಬೆಳಗ್ಗೆ, ಶಶಿಕಲಾರವರು ಯುನಿಟಿ ಬ್ಯಾಗ್ನಲ್ಲಿ ತವರು ಮನೆಯವರು ಹಾಗೂ ಗಂಡನ ಮನೆಯವರು ಉಡುಗೊರೆಯಾಗಿ ನೀಡಿದ ವಿವಿಧ ಶೈಲಿಯ ವಿವಿಧ ಮಾದರಿಯ ಒಟ್ಟು 45 ಗ್ರಾಂ ಚಿನ್ನಾಭರಣಗಳನ್ನು ಇರಿಸಿಕೊಂಡು, ಪತಿ ಮತ್ತು ಚಿಕ್ಕ ಮಗುವಿನ ಜೊತೆಯಲ್ಲಿ ಕಲ್ಲಡ್ಕದಿಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಬಂದು, ಬಿ ಸಿ ರೋಡ್ ಬಸ್ಸಿನಿಂದ ಇಳಿದಿರುತ್ತಾರೆ. ಬಳಿಕ ರಸ್ತೆದಾಟಿ ಬಿ ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಸ್ವೀಟ್ಸ್ ಅಂಗಡಿಗೆ ತೆರಳಿದ್ದು, ಈ ವೇಳೆ ಸದ್ರಿಯವರ ಬ್ಯಾಗಲ್ಲಿ ಚಿನ್ನಾಭರಣಗಳಿರುತ್ತದೆ. ಸ್ವಲ್ಪ‌ ಸಮಯದ ಬಳಿಕ, ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ, ಶಶಿಕಲಾ ರವರ ಬ್ಯಾಗಲ್ಲಿದ್ದ 45 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುತ್ತದೆ. ಅವುಗಳ ಅಂದಾಜು ಮೌಲ್ಯ ರೂ. 2 ಲಕ್ಷ ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿ, ಅ.ಕ್ರ: 91/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿ “ರೋಟಾಲಯ ಸಂಗೀತ ಸ್ಪರ್ಧೆ”

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya
error: Content is protected !!