April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಆಶ್ರಯದಲ್ಲಿ ಕಳೆಂಜ ಗ್ರಾಮದ ಬಂಡೇರಿಯಲ್ಲಿ ನಡೆಸಲ್ಪಡುತ್ತಿರುವ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’, ‘ಗೋನಂದಾರತಿ’ ಹಾಗೂ ಇದಕ್ಕೆ ಪೂರ್ವಭಾವಿಯಾಗಿ ನಡೆದ ‘ಗೋಗ್ರಾಸ ಹೊರೆಕಾಣಿಕೆ ಶೋಭಾಯಾತ್ರೆ” ಯ ಕಾರ್ಯಕ್ರಮಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ರೂ. 5,00,000/- ಅನುದಾನದ ಮೊತ್ತದ ಡಿ.ಡಿ. ಯನ್ನು ಮೇ 25 ರಂದು ಶ್ರೀಕ್ಷೇತ್ರದ ಪರವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣರವರು ಟ್ರಸ್ಟ್‌ ನ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಇಂಜಿನೀಯರ್ ಸುರೇಶ್, ಕಳೆಂಜ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಉಮೇಶ್, ಕಳೆಂಜ ಗ್ರಾಮದ ಸೇವಾ ಪ್ರತಿನಿಧಿ ಜನಾರ್ದನ್, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಅಧ್ಯಕ್ಷ ಡಾ| ಎಂ.ಎಂ. ದಯಾಕರ್, ಟ್ರಸ್ಟ್‌ನ ಕಾರ್ಯದರ್ಶಿ ಸುಬ್ರಹ್ಮಣ್ಯ ಕುಮಾರ್ ಅಗರ್ತ, ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿಯ ಪದಾಧಿಕಾರಿಗಳಾದ ರಮೇಶ್ ಪೂಜಾರಿ, ಕುಮಾರನಾಥ ಶೆಟ್ಟಿ ಕಲ್ಮಂಜ, ರಾಘವೇಂದ್ರ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಗೋಶಾಲೆಗೆ ನೀಡಿದ ಅನುದಾನಕ್ಕಾಗಿ ಟ್ರಸ್ಟ್ ವತಿಯಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗೌರವಪೂರ್ವಕ ಕೃತಜ್ಞತೆಗಳನ್ನು ಅರ್ಪಿಸಿದರು..

Related posts

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

Suddi Udaya

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!