July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಆಶ್ರಯದಲ್ಲಿ ಕಳೆಂಜ ಗ್ರಾಮದ ಬಂಡೇರಿಯಲ್ಲಿ ನಡೆಸಲ್ಪಡುತ್ತಿರುವ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’, ‘ಗೋನಂದಾರತಿ’ ಹಾಗೂ ಇದಕ್ಕೆ ಪೂರ್ವಭಾವಿಯಾಗಿ ನಡೆದ ‘ಗೋಗ್ರಾಸ ಹೊರೆಕಾಣಿಕೆ ಶೋಭಾಯಾತ್ರೆ” ಯ ಕಾರ್ಯಕ್ರಮಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ರೂ. 5,00,000/- ಅನುದಾನದ ಮೊತ್ತದ ಡಿ.ಡಿ. ಯನ್ನು ಮೇ 25 ರಂದು ಶ್ರೀಕ್ಷೇತ್ರದ ಪರವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣರವರು ಟ್ರಸ್ಟ್‌ ನ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಇಂಜಿನೀಯರ್ ಸುರೇಶ್, ಕಳೆಂಜ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಉಮೇಶ್, ಕಳೆಂಜ ಗ್ರಾಮದ ಸೇವಾ ಪ್ರತಿನಿಧಿ ಜನಾರ್ದನ್, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಅಧ್ಯಕ್ಷ ಡಾ| ಎಂ.ಎಂ. ದಯಾಕರ್, ಟ್ರಸ್ಟ್‌ನ ಕಾರ್ಯದರ್ಶಿ ಸುಬ್ರಹ್ಮಣ್ಯ ಕುಮಾರ್ ಅಗರ್ತ, ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿಯ ಪದಾಧಿಕಾರಿಗಳಾದ ರಮೇಶ್ ಪೂಜಾರಿ, ಕುಮಾರನಾಥ ಶೆಟ್ಟಿ ಕಲ್ಮಂಜ, ರಾಘವೇಂದ್ರ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಗೋಶಾಲೆಗೆ ನೀಡಿದ ಅನುದಾನಕ್ಕಾಗಿ ಟ್ರಸ್ಟ್ ವತಿಯಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗೌರವಪೂರ್ವಕ ಕೃತಜ್ಞತೆಗಳನ್ನು ಅರ್ಪಿಸಿದರು..

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya
error: Content is protected !!