23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

ಕೊಯ್ಯೂರು : ಇತ್ತೀಚಿನ ದಿನಗಳಲ್ಲಿ ತಾಲೂಕಿನಲ್ಲಿ ವಿವಿಧ ಭಜನಾ ಮಂಡಳಿಗಳಿಗೆ ಭೇಟಿ ನೀಡುತ್ತಿರುವ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಯ್ಯೂರು ದೇವಸ್ಥಾನ ಇಲ್ಲಿಗೆ ಭೇಟಿ ನೀಡಿದರು. ಈ ಸಂದರ್ಭ ಅವರನ್ನು ಭಜನಾ ಮಂಡಳಿಯ ಪರವಾಗಿ ದೇವಸ್ಥಾನದ ಮುಖ್ಯ ಅರ್ಚಕರು ಹಾಗೂ ಭಜನಾ ಮಂಡಳಿಯ ಗೌರವಾಧ್ಯಕ್ಷ ಅಶೋಕ್ ಕುಮಾರ್ ಭಾಂಗಿಣ್ಣಾಯ ಶಾಲು ಹೊದಿಸಿ ಗೌರವಿಸಿದರು.


ನಂತರ ತಾಲೂಕಿನಲ್ಲಿ ಈಗ ನಡೆಯುತ್ತಿರುವ ಭಜನೆಯ ಬಗ್ಗೆ ವಿವರಣೆಯನ್ನು ನೀಡುತ್ತಾ ಈಗಾಗಲೇ ಹಲವಾರು ಭಜನಾ ಮಂಡಳಿಗಳಿಂದ ಭಜನೆಯ ವ್ಯವಸ್ಥೆಯ ಬಗ್ಗೆ ಸ್ವಲ್ಪ ಬದಲಾವಣೆಯ ಬೇಡಿಕೆ ಇರುವುದರಿಂದ ತಾಲೂಕು ಭಜನಾ ಪರಿಷತ್ತಿನ ವತಿಯಿಂದ ಅತಿ ಶೀಘ್ರದಲ್ಲಿ ಇದಕ್ಕೆ ಸಂಬಂಧಪಟ್ಟವರನ್ನು ಒಗ್ಗೂಡಿಸಿ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವುದಾಗಿ ತಿಳಿಸಿದರು.

ಮಾತ್ರವಲ್ಲದೆ ಇಲ್ಲಿಯ ಭಜನಾ ಮಂಡಳಿಯ ಪದಾಧಿಕಾರಿಗಳಿಂದ ಹಾಗೂ ಸದಸ್ಯರುಗಳಿಂದ ಕೂಡ ಮಾಹಿತಿ ಸಂಗ್ರಹಿಸಿಕೊಂಡರು.

ಈ ಸಂದರ್ಭ ದೇವಸ್ಥಾನದ ಮುಖ್ಯ ಅರ್ಚಕರಾದ ಅಶೋಕ್ ಕುಮಾರ್ ಭಾಂಗಿಣ್ಣಾಯ, ಭಜನಾ ಮಂಡಳಿಯ ಕಾರ್ಯದರ್ಶಿಯಾದ ನಾರಾಯಣ ಪೂಜಾರಿ ಗುರ್ಬೋಟ್ಟು, ಕೋಶಾಧಿಕಾರಿ ಡೀಕಯ್ಯ ಗೌಡ “ಸಮೃದ್ಧಿ” ಮಲೆಕಿನ್ಯಾಜೆ ಹಾಗೂ ಭಜನಾ ತರಬೇತಿದಾರರಾದ ಹರೀಶ್ ವಿ. ನೆರಿಯ, ಭಜನಾ ಮಂಡಳಿಯ ನಿಕಟ ಪೂರ್ವ ಅಧ್ಯಕ್ಷ /ಕಾರ್ಯದರ್ಶಿಗಳು ಮತ್ತು ಭಜನಾ ಮಂಡಳಿಯ ಹಿರಿಯ ಸದಸ್ಯರುಗಳು ಮತ್ತು ಭಜನಾ ಮಂಡಳಿಯ ಎರಡು ತಂಡಗಳ ಸದಸ್ಯರುಗಳು ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.

ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷ ದಿನೇಶ್ ಗೌಡ ಜಾಲ್ನಪ್ಪು ಸ್ವಾಗತಿಸಿ, ವಂದಿಸಿದರು.

Related posts

ವೇಣೂರು ಸೇವಾ ಶರಧಿ ವಿಶ್ವಸ್ತ ಮಂಡಳಿ ರಜತ ಸಂಭ್ರಮ, ಭಾರತೀ ಕಲಾ ಮಂಟಪದ ಉದ್ಘಾಟನೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!