24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಮಡಂತ್ಯಾರು: ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಇವರ ಸಾರಥ್ಯದಲ್ಲಿ ಭಜನಾ ತಂಡದ ಭಜಕ ವಿದ್ಯಾರ್ಥಿಗಳಿಗೆ 4ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ದೇವಳದ ಪ್ರಧಾನ ಅರ್ಚಕ ಟಿ.ವಿ. ಶ್ರೀಧರ ರಾವ್ ಪೇಜಾವರ ಮತ್ತು ದೇವಳದ ಮಾಜಿ ಆಡಳಿತ ಮೊಕ್ತೆಸರರಾದ ವಿಠಲ್ ಶೆಟ್ಟಿ ಮೂಡಾಯೂರು, ಭಜನಾ ತಂಡದ ಗೌರವಾಧ್ಯಕ್ಷರಾದ ಯೋಗೀಶ್ ಹೆಗ್ಡೆ, ಗೌರವ ಸಲಹೆಗಾರರಾದ ಪ್ರಶಾಂತ್ ಎಮ್, ಅಧ್ಯಕ್ಷರಾದ‌ ಪ್ರವೀಣ್ ಹೆಗ್ಡೆ, ಕಾರ್ಯದರ್ಶಿ ದೀರಜ್, ಹಾಗೂ ತಂಡದ ಮಾಜಿ ಅಧ್ಯಕ್ಷ ದಯಾನಂದ ಪೂಜಾರಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಭಜನೆ, ವಿದ್ಯೆ, ಸಂಸ್ಕ್ರತಿ – ಸಂಸ್ಕಾರಗಳ ಬಗ್ಗೆ ಭಜಕರಿಗೆ ಮಾಹಿತಿ ಮತ್ತು ಸಲಹೆ ನೀಡಿದರು. ಭಜನಾ ತಂಡದ ಸರ್ವಸದಸ್ಯರ ಉಪಸ್ಥಿತಿಯಲ್ಲಿ ತಂಡದಲ್ಲಿರುವ 45ಕ್ಕೂ ಅಧಿಕ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

Related posts

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya
error: Content is protected !!