23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

ಬೆಳ್ತಂಗಡಿ: ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಹಾಗೂ ಜೀವನ ಮೌಲ್ಯಗಳನ್ನು ರೂಪಿಸುವುದೇ ಶಿಕ್ಷಣದ ಉದ್ದೇಶವಾಗಿದೆ ಎಂದು ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ರೇಂಜರ್ ಲೀಡರ್ ಶ್ರೀಮತಿ ಸೀತಾಲಕ್ಷ್ಮಿ ಹೇಳಿದರು.


ಅವರು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಘಟಕದ ಸಹಯೋಗದೊಂದಿಗೆ ನಡೆದ ಎರಡು ದಿವಸಗಳ ಬೇಸಿಗೆ ಶಿಬಿರದ ಸಮರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ, ಪ್ರತಿಯೊಂದು ಕೆಲಸವನ್ನು ಇಷ್ಟಪಟ್ಟು ಮಾಡಿದಾಗ ಯಶಸ್ಸು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಹುಟ್ಟಿದ ಮನೆ, ಊರು, ಸಮಾಜಕ್ಕೆ ಹೆಸರನ್ನು ತಂದುಕೊಡುವಲ್ಲಿ ಸಫಲರಾಗಬೇಕು. ಪ್ರತಿ ಸೋಲಿನಲ್ಲೂ ಗೆಲುವಿನ ನಿರೀಕ್ಷೆಯನ್ನು ಹೊಂದಿರಬೇಕು ಎಂದರು.


ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಹಾಗೂ ವಾಣಿ ಕಾಲೇಜಿನ ಪ್ರಾಂಶುಪಾಲ ಡಿ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್, ಗೈಡ್ಸ್ ಕ್ಯಾಪ್ಟನ್ ಗಳಾದ ಶ್ರೀಮತಿ ಶೋಭಾ ನವೀನ್, ಶ್ರೀಮತಿ ಸುಮಲತಾ, ಕಬ್ ಮಾಸ್ಟರ್ ಶ್ರೀಮತಿ ಹೇಮಲತಾ, ಪ್ಲಾಕ್ ಲೀಡರ್ ಶ್ರೀಮತಿ ನಮಿತಾ ಉಪಸ್ಥಿತರಿದ್ದರು. ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಬೆಳಿಯಪ್ಪ. ಕೆ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರ ವಿವರ ನೀಡಿದರು.


ಕಾಲೇಜಿನ ರೇಂಜರ್ ಲೀಡರ್ ಶ್ರೀಮತಿ ರಕ್ಷಾ ಸ್ವಾಗತಿಸಿದರು. ಗೈಡ್ ಕ್ಯಾಪ್ಟನ್ ಶ್ರೀಮತಿ ಭವ್ಯ ಧನ್ಯವಾದವಿತ್ತರು. ಗೈಡ್ಸ್ ವಿದ್ಯಾರ್ಥಿನಿಯರಾದ ತ್ರಿಷಾ ಮತ್ತು ಸೌಜನ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

Suddi Udaya

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

Suddi Udaya

ಡಿ.28 (ನಾಳೆ) ವಿದ್ಯುತ್ ನಿಲುಗಡೆ

Suddi Udaya
error: Content is protected !!