26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕಲ್ಮಂಜ : ಮಹಿಳೆಯು ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ ಯುನಿಟಿ ಬ್ಯಾಗ್ ನಲ್ಲಿ ಇರಿಸಿದ್ದ ಚಿನ್ನಾಭರಣಗಳ ಕಳವುಗೊಂಡಿರುವ ಬಗ್ಗೆ ಮೇ 23 ರಂದು ವರದಿಯಾಗಿದೆ.

ಕಲ್ಮಂಜ ಗ್ರಾಮದ ನಿಡಿಗಲ್ ಆರ್ದಶ ನಗರ ನಿವಾಸಿ ಶಶಿಕಲ ಎಂಬುವವರ ದೂರಿನಂತೆ, ಮೇ 23 ರಂದು ಬೆಳಗ್ಗೆ, ಶಶಿಕಲಾರವರು ಯುನಿಟಿ ಬ್ಯಾಗ್ನಲ್ಲಿ ತವರು ಮನೆಯವರು ಹಾಗೂ ಗಂಡನ ಮನೆಯವರು ಉಡುಗೊರೆಯಾಗಿ ನೀಡಿದ ವಿವಿಧ ಶೈಲಿಯ ವಿವಿಧ ಮಾದರಿಯ ಒಟ್ಟು 45 ಗ್ರಾಂ ಚಿನ್ನಾಭರಣಗಳನ್ನು ಇರಿಸಿಕೊಂಡು, ಪತಿ ಮತ್ತು ಚಿಕ್ಕ ಮಗುವಿನ ಜೊತೆಯಲ್ಲಿ ಕಲ್ಲಡ್ಕದಿಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಬಂದು, ಬಿ ಸಿ ರೋಡ್ ಬಸ್ಸಿನಿಂದ ಇಳಿದಿರುತ್ತಾರೆ. ಬಳಿಕ ರಸ್ತೆದಾಟಿ ಬಿ ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಸ್ವೀಟ್ಸ್ ಅಂಗಡಿಗೆ ತೆರಳಿದ್ದು, ಈ ವೇಳೆ ಸದ್ರಿಯವರ ಬ್ಯಾಗಲ್ಲಿ ಚಿನ್ನಾಭರಣಗಳಿರುತ್ತದೆ. ಸ್ವಲ್ಪ‌ ಸಮಯದ ಬಳಿಕ, ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ, ಶಶಿಕಲಾ ರವರ ಬ್ಯಾಗಲ್ಲಿದ್ದ 45 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುತ್ತದೆ. ಅವುಗಳ ಅಂದಾಜು ಮೌಲ್ಯ ರೂ. 2 ಲಕ್ಷ ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿ, ಅ.ಕ್ರ: 91/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ