September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕಲ್ಮಂಜ : ಮಹಿಳೆಯು ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ ಯುನಿಟಿ ಬ್ಯಾಗ್ ನಲ್ಲಿ ಇರಿಸಿದ್ದ ಚಿನ್ನಾಭರಣಗಳ ಕಳವುಗೊಂಡಿರುವ ಬಗ್ಗೆ ಮೇ 23 ರಂದು ವರದಿಯಾಗಿದೆ.

ಕಲ್ಮಂಜ ಗ್ರಾಮದ ನಿಡಿಗಲ್ ಆರ್ದಶ ನಗರ ನಿವಾಸಿ ಶಶಿಕಲ ಎಂಬುವವರ ದೂರಿನಂತೆ, ಮೇ 23 ರಂದು ಬೆಳಗ್ಗೆ, ಶಶಿಕಲಾರವರು ಯುನಿಟಿ ಬ್ಯಾಗ್ನಲ್ಲಿ ತವರು ಮನೆಯವರು ಹಾಗೂ ಗಂಡನ ಮನೆಯವರು ಉಡುಗೊರೆಯಾಗಿ ನೀಡಿದ ವಿವಿಧ ಶೈಲಿಯ ವಿವಿಧ ಮಾದರಿಯ ಒಟ್ಟು 45 ಗ್ರಾಂ ಚಿನ್ನಾಭರಣಗಳನ್ನು ಇರಿಸಿಕೊಂಡು, ಪತಿ ಮತ್ತು ಚಿಕ್ಕ ಮಗುವಿನ ಜೊತೆಯಲ್ಲಿ ಕಲ್ಲಡ್ಕದಿಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಬಂದು, ಬಿ ಸಿ ರೋಡ್ ಬಸ್ಸಿನಿಂದ ಇಳಿದಿರುತ್ತಾರೆ. ಬಳಿಕ ರಸ್ತೆದಾಟಿ ಬಿ ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಸ್ವೀಟ್ಸ್ ಅಂಗಡಿಗೆ ತೆರಳಿದ್ದು, ಈ ವೇಳೆ ಸದ್ರಿಯವರ ಬ್ಯಾಗಲ್ಲಿ ಚಿನ್ನಾಭರಣಗಳಿರುತ್ತದೆ. ಸ್ವಲ್ಪ‌ ಸಮಯದ ಬಳಿಕ, ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ, ಶಶಿಕಲಾ ರವರ ಬ್ಯಾಗಲ್ಲಿದ್ದ 45 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುತ್ತದೆ. ಅವುಗಳ ಅಂದಾಜು ಮೌಲ್ಯ ರೂ. 2 ಲಕ್ಷ ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿ, ಅ.ಕ್ರ: 91/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ -ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಮುಗುಳಿ ವಸತಿ ನಿಲಯದ ಬಳಿ ಅಡಿಕೆ ತೋಟದಲ್ಲಿ ಚಿರತೆ ಪತ್ತೆ

Suddi Udaya

ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ :ಎಸ್.ಡಿ.ಎಂ ಪ್ರತಿಪಾದನೆಗೆ ರಾಷ್ಟಮಟ್ಟದ ಮನ್ನಣೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!