25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕಲ್ಮಂಜ : ಮಹಿಳೆಯು ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ ಯುನಿಟಿ ಬ್ಯಾಗ್ ನಲ್ಲಿ ಇರಿಸಿದ್ದ ಚಿನ್ನಾಭರಣಗಳ ಕಳವುಗೊಂಡಿರುವ ಬಗ್ಗೆ ಮೇ 23 ರಂದು ವರದಿಯಾಗಿದೆ.

ಕಲ್ಮಂಜ ಗ್ರಾಮದ ನಿಡಿಗಲ್ ಆರ್ದಶ ನಗರ ನಿವಾಸಿ ಶಶಿಕಲ ಎಂಬುವವರ ದೂರಿನಂತೆ, ಮೇ 23 ರಂದು ಬೆಳಗ್ಗೆ, ಶಶಿಕಲಾರವರು ಯುನಿಟಿ ಬ್ಯಾಗ್ನಲ್ಲಿ ತವರು ಮನೆಯವರು ಹಾಗೂ ಗಂಡನ ಮನೆಯವರು ಉಡುಗೊರೆಯಾಗಿ ನೀಡಿದ ವಿವಿಧ ಶೈಲಿಯ ವಿವಿಧ ಮಾದರಿಯ ಒಟ್ಟು 45 ಗ್ರಾಂ ಚಿನ್ನಾಭರಣಗಳನ್ನು ಇರಿಸಿಕೊಂಡು, ಪತಿ ಮತ್ತು ಚಿಕ್ಕ ಮಗುವಿನ ಜೊತೆಯಲ್ಲಿ ಕಲ್ಲಡ್ಕದಿಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಬಂದು, ಬಿ ಸಿ ರೋಡ್ ಬಸ್ಸಿನಿಂದ ಇಳಿದಿರುತ್ತಾರೆ. ಬಳಿಕ ರಸ್ತೆದಾಟಿ ಬಿ ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಸ್ವೀಟ್ಸ್ ಅಂಗಡಿಗೆ ತೆರಳಿದ್ದು, ಈ ವೇಳೆ ಸದ್ರಿಯವರ ಬ್ಯಾಗಲ್ಲಿ ಚಿನ್ನಾಭರಣಗಳಿರುತ್ತದೆ. ಸ್ವಲ್ಪ‌ ಸಮಯದ ಬಳಿಕ, ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ, ಶಶಿಕಲಾ ರವರ ಬ್ಯಾಗಲ್ಲಿದ್ದ 45 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುತ್ತದೆ. ಅವುಗಳ ಅಂದಾಜು ಮೌಲ್ಯ ರೂ. 2 ಲಕ್ಷ ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿ, ಅ.ಕ್ರ: 91/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya
error: Content is protected !!