July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

ಬೆಳ್ತಂಗಡಿ: ಬೆಳ್ತಂಗಡಿಯ ಮಾಣಿಕ್ಯ.ನೇರ ನಡೆ-ನುಡಿಯ ಸ್ವಾಭಿಮಾನಿ ನಾಯಕ ಮಾಜಿ ಶಾಸಕ ಕೆ . ವಸಂತ ಬಂಗೇರರಿಗೆ ಸಾವಿರದ ನುಡಿ ನಮನಗಳು ಕಾಯ೯ಕ್ರಮ ಮೇ 25 ರಂದು ಕಿನ್ಯಮ್ಮಯಾನೆ ಗುಣವತಿ ಅಮ್ಮಸಭಾಂಗಣ ಜೈನ್‌ಪೇಟೆ, ಬೆಳ್ತಂಗಡಿಯಲ್ಲಿ ಜರುಗಿತು.

ಮಾಜಿ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ನುಡಿನಮನ ಸಲ್ಲಿಸಿ, ಬಂಗೇರ ನಿಧನ ಸುದ್ದಿ ತಿಳಿದು ಬಹಳಷ್ಟು ದು:ಖವಾಯಿತು. ಸಿಟ್ಟು ಇದ್ದವರ ಬದುಕು ಕಷ್ಟಕರವಾಗುತ್ತದೆ. ಲಂಚ ತೆಗೆದುಕೊಳ್ಳದವರಿಗೆ ಸಹಜವಾಗಿ ಸಿಟ್ಟು ಜಾಸ್ತಿ ಇರುತ್ತದೆ. ಬಂಗೇರ ಅವರು ಈ ರೀತಿಯ ವ್ಯಕ್ತಿ ಆಗಿದ್ದರು, ನಮ್ಮ ಹಿಂದೆ ಬರುವುದು ನಮ್ಮ ಕೀರ್ತಿ ಮಾತ್ರ ಎಂದರು.ಎಂದು ಹೇಳಿದರು. ‌ಅಳದಂಗಡಿ ಅರಮನೆ ತಿಮ್ಮಣ್ಣ ಅರಸರಾದ ಡಾ. ಪದ್ಮಪ್ರಸಾದ್ ಅಜಿಲ, ದಾರಿಮಿ, ಮಂಜೊಟ್ಟಿ ಚಚ್೯ನ ಧಮ೯ಗುರು ಫಾ. ಪ್ರವೀಣ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸ್ವಾಗತಿಸಿ, ಬಂಗೇರ ಅವರು ತಮ್ಮ ಜೀವನವನ್ನು ಬಡವರಿಗಾಗಿ ಮುಡಿಪಾಗಿಟ್ಟವರು, ಅವರ ಅಂತಿಮ ದರ್ಶನಕ್ಕೆ ಬಂದ ಜನಸಾಗರ ಇದಕ್ಕೆ ಸಾಕ್ಷಿ‌ ಎಂದರು.

ಬಂಗೇರ ಅವರ ಪತ್ನಿ ಸುಜೀತಾ ಬಂಗೇರ, ಪುತ್ರಿಯರಾದ ಪ್ರಿತಿತಾ ಬಂಗೇರ, ಬಿನುತ ಬಂಗೇರ, ಅಳಿಯ ಧಮ೯ವಿಜೇತ್ , ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕೆ. ಬಂಗೇರ ಕಾಶಿಪಟ್ಣ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರ ಕೆ.ಎಮ್ ನಾಗೇಶ್ ಕುಮಾ‌ರ್ ಗೌಡ ಮಹಿಳಾ ಘಟಕದ ನಮಿತಾ ಪೂಜಾರಿ ಉಪಸ್ಥಿತರಿದ್ದರು. ಯಂಗ್ ಚಾಲೆಂಜರ್ಸ್ ಮುಂಡಾಜೆಯ ಸಂಚಾಲಕ ನಾಮದೇವ ರಾವ್, ಕಾಮಿ೯ಕ ಮುಖಂಡ ಬಿ.ಎಂ ಭಟ್, ಸಾಹಿತಿ ಅಮೃತ ಶೆಟ್ಟಿ ಆತ್ರಾಡಿ, ಪತ್ರಕತ೯ ಶಿಬಿ ಧಮ೯ಸ್ಥಳ, ನ್ಯಾಯವಾದಿ ಮನೋಹರ್ ಇಳಂತಿಲ ಮಾತನಾಡಿ ನುಡಿನಮನ ಸಲ್ಲಿಸಿದರು.

ಕಾಯ೯ಕ್ರಮದಲ್ಲಿ ಪ್ರಮುಖರಾದ ಧರಣೇಂದ್ರ ಕುಮಾರ್, ಪ್ರವೀಣ್ ಫೆರ್ನಾಂಡಿಸ್, ಜಯವಿಕ್ರಮ ಕಲ್ಲಾಪು, ಶೇಖರ ಕುಕ್ಕೇಡಿ, ರವೀಂದ್ರ ಪೂಜಾರಿ ಬಾಂದೊಟ್ಟು, ಚಿದಾನಂದ ಪೂಜಾರಿ ಎಲ್ದಡ್ಕ, ಪದ್ಮನಾಭ ಸಾಲ್ಯಾನ್, ಅಯ್ಯೂಬ್ ಡಿ.ಕೆ, ಅಬ್ದುಲ್ ರಜಾಕ್ ತೆಕ್ಕಾರು, ಜೀವಂಧರ್ ಕುಮಾರ್, ಉಷಾಶರತ್, ಪ್ರಭಾಕರ ಪೂಜಾರಿ ಧಮ೯ಸ್ಥಳ, ವಿನ್ಸೆಂಟ್ ಡಿ’ ಸೋಜ ಮಡಂತ್ಯಾರು ಮೊದಲಾದವರು ಉಪಸ್ಥಿತರಿದ್ದರು.

ಪದ್ಮನಾಭ ಸಾಲ್ಯಾನ್ ಮಾಲಾಡಿ ಕಾಯ೯ಕ್ರಮ ನಿರೂಪಿಸಿದರು.

Related posts

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶಾಖಾ ಮಠ ನಿರ್ಮಾಣ: ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಂದ ವೀಕ್ಷಣೆ

Suddi Udaya

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕುವೆಟ್ಟು ಶಕ್ತಿಕೇಂದ್ರದಿಂದ ಓಡೀಲು ದೇವಸ್ಥಾನದಲ್ಲಿ ಪೂಜೆ

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya
error: Content is protected !!