September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕಲ್ಮಂಜ : ಮಹಿಳೆಯು ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ ಯುನಿಟಿ ಬ್ಯಾಗ್ ನಲ್ಲಿ ಇರಿಸಿದ್ದ ಚಿನ್ನಾಭರಣಗಳ ಕಳವುಗೊಂಡಿರುವ ಬಗ್ಗೆ ಮೇ 23 ರಂದು ವರದಿಯಾಗಿದೆ.

ಕಲ್ಮಂಜ ಗ್ರಾಮದ ನಿಡಿಗಲ್ ಆರ್ದಶ ನಗರ ನಿವಾಸಿ ಶಶಿಕಲ ಎಂಬುವವರ ದೂರಿನಂತೆ, ಮೇ 23 ರಂದು ಬೆಳಗ್ಗೆ, ಶಶಿಕಲಾರವರು ಯುನಿಟಿ ಬ್ಯಾಗ್ನಲ್ಲಿ ತವರು ಮನೆಯವರು ಹಾಗೂ ಗಂಡನ ಮನೆಯವರು ಉಡುಗೊರೆಯಾಗಿ ನೀಡಿದ ವಿವಿಧ ಶೈಲಿಯ ವಿವಿಧ ಮಾದರಿಯ ಒಟ್ಟು 45 ಗ್ರಾಂ ಚಿನ್ನಾಭರಣಗಳನ್ನು ಇರಿಸಿಕೊಂಡು, ಪತಿ ಮತ್ತು ಚಿಕ್ಕ ಮಗುವಿನ ಜೊತೆಯಲ್ಲಿ ಕಲ್ಲಡ್ಕದಿಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಬಂದು, ಬಿ ಸಿ ರೋಡ್ ಬಸ್ಸಿನಿಂದ ಇಳಿದಿರುತ್ತಾರೆ. ಬಳಿಕ ರಸ್ತೆದಾಟಿ ಬಿ ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಸ್ವೀಟ್ಸ್ ಅಂಗಡಿಗೆ ತೆರಳಿದ್ದು, ಈ ವೇಳೆ ಸದ್ರಿಯವರ ಬ್ಯಾಗಲ್ಲಿ ಚಿನ್ನಾಭರಣಗಳಿರುತ್ತದೆ. ಸ್ವಲ್ಪ‌ ಸಮಯದ ಬಳಿಕ, ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ, ಶಶಿಕಲಾ ರವರ ಬ್ಯಾಗಲ್ಲಿದ್ದ 45 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುತ್ತದೆ. ಅವುಗಳ ಅಂದಾಜು ಮೌಲ್ಯ ರೂ. 2 ಲಕ್ಷ ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿ, ಅ.ಕ್ರ: 91/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!