July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕಲ್ಮಂಜ : ಮಹಿಳೆಯು ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ ಯುನಿಟಿ ಬ್ಯಾಗ್ ನಲ್ಲಿ ಇರಿಸಿದ್ದ ಚಿನ್ನಾಭರಣಗಳ ಕಳವುಗೊಂಡಿರುವ ಬಗ್ಗೆ ಮೇ 23 ರಂದು ವರದಿಯಾಗಿದೆ.

ಕಲ್ಮಂಜ ಗ್ರಾಮದ ನಿಡಿಗಲ್ ಆರ್ದಶ ನಗರ ನಿವಾಸಿ ಶಶಿಕಲ ಎಂಬುವವರ ದೂರಿನಂತೆ, ಮೇ 23 ರಂದು ಬೆಳಗ್ಗೆ, ಶಶಿಕಲಾರವರು ಯುನಿಟಿ ಬ್ಯಾಗ್ನಲ್ಲಿ ತವರು ಮನೆಯವರು ಹಾಗೂ ಗಂಡನ ಮನೆಯವರು ಉಡುಗೊರೆಯಾಗಿ ನೀಡಿದ ವಿವಿಧ ಶೈಲಿಯ ವಿವಿಧ ಮಾದರಿಯ ಒಟ್ಟು 45 ಗ್ರಾಂ ಚಿನ್ನಾಭರಣಗಳನ್ನು ಇರಿಸಿಕೊಂಡು, ಪತಿ ಮತ್ತು ಚಿಕ್ಕ ಮಗುವಿನ ಜೊತೆಯಲ್ಲಿ ಕಲ್ಲಡ್ಕದಿಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಬಂದು, ಬಿ ಸಿ ರೋಡ್ ಬಸ್ಸಿನಿಂದ ಇಳಿದಿರುತ್ತಾರೆ. ಬಳಿಕ ರಸ್ತೆದಾಟಿ ಬಿ ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಸ್ವೀಟ್ಸ್ ಅಂಗಡಿಗೆ ತೆರಳಿದ್ದು, ಈ ವೇಳೆ ಸದ್ರಿಯವರ ಬ್ಯಾಗಲ್ಲಿ ಚಿನ್ನಾಭರಣಗಳಿರುತ್ತದೆ. ಸ್ವಲ್ಪ‌ ಸಮಯದ ಬಳಿಕ, ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ, ಶಶಿಕಲಾ ರವರ ಬ್ಯಾಗಲ್ಲಿದ್ದ 45 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುತ್ತದೆ. ಅವುಗಳ ಅಂದಾಜು ಮೌಲ್ಯ ರೂ. 2 ಲಕ್ಷ ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿ, ಅ.ಕ್ರ: 91/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya
error: Content is protected !!