July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೇ 24ರಂದು ನಡೆದಿದೆ.

ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಶಾಲಪ್ಪ ಗೌಡ ಯಾನೆ ಪ್ರಶಾಂತ(35ವ) ಮೃತಪಟ್ಟ ಯುವಕ.

ಇವರು ಸಂಚರಿಸುತ್ತಿದ್ದ ದ್ವಿಚಕ್ರವಾಹನಕ್ಕೆ ಮೇ 21ರಂದು ಇನ್ನೋವಾ ಕಾರು ಡಿಕ್ಕಿ ಹೊಡೆದು, ತಲೆ ಹಾಗೂ ಹೊಟ್ಟೆ ಭಾಗಕ್ಕೆ ತೀವ್ರ ಗಾಯಗಳುಂಟಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.


ತೋಟತ್ತಾಡಿ ಗ್ರಾಮದ ಅಗರಿ ಕೃಷ್ಣಪ್ಪ ಗೌಡರ ಪುತ್ರರಾಗಿರುವ ಇವರು ಅವಿವಾಹಿತರಾಗಿದ್ದು, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ. 

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಬಂಟ ಕ್ರೀಡೋತ್ಸವ

Suddi Udaya

ಶ್ರೀ ನಾಳ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya
error: Content is protected !!