July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

ಬೆಳ್ತಂಗಡಿ; ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉಜಿರೆ ಬಿ.ಎನ್.ವೈ ಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಯಾಗಿರುವ ಪ್ರದೀಪ್ ಸುರೇಶ್ ರೂಗಿ ಎಂಬವರೇ ಹಣ ಕಳೆದು ಕೊಂಡವರಾಗಿದ್ದಾರೆ. ಇವರ ಊರಾದ ಗುಲ್ಬರ್ಗ ಜಿಲ್ಲೆಯ ಅಫ್ಜಲ್ ಪುರದ ಯೂನಿಯನ್ ಬ್ಯಾಂಕಿನ‌ ಖಾತೆಯಿಂದ ಹಣ ಅಪಹರಿಸಲಾಗಿದೆ.

ಮೇ 23 ರ ವರೆಗೆ ಇವರ ಖಾತೆಯಲ್ಲಿ ಹಣವಿತ್ತು. ರಾತ್ರಿ 8.30 ರ ಬಳಿಕ ಇವರ ಮೊಬೈಲ್ ಗೆ ಎಸ್. ಎಂ.ಎಸ್.ಗಳು ಬಂದಿದ್ದು, ಒಟಿಪಿ ಬಂದಿದೆ. ಇದಕ್ಕೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಆದರೆ ಬೆಳಿಗ್ಗೆ ಪರಿಶೀಲಿಸಿದಾಗ ಅವರ ಖಾತೆಯಲ್ಲಿದ್ದ ರೂ 3,14,000 ವನ್ನು ಯಾವುದೋ ಅನಾಮಧೇಯ ವ್ಯಕ್ತಿಯ ಖಾತೆಗೆ ವರ್ಗಾವಣೆ ಗೊಂಡಿರುವುದು ಕಂಡುಬರುತ್ತಿದೆ. ಎಂದು ಅವರು ಬೆಳ್ತಂಗಡಿ ಪೋಲಿಸರಿಗೆ ದೂರು ನೀಡಲಾಗಿದ್ದಾರೆ. ಪೊಲೀಸರು ಪ್ರಕರಣ‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Related posts

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!