27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

ಬೆಳ್ತಂಗಡಿ : ಕೊಯ್ಯೂರು ಸಮೀಪದ ಕಾಂತಾಜೆ ಎಂಬಲ್ಲಿ ತಿರುವಿನ ಸೇತುವೆ ತಡೆ ಗೋಡೆಗೆ ಸರಕಾರಿ ಬಸ್ ಡಿಕ್ಕಿಯಾದ ಘಟನೆ ಮೇ.26 ಬೆಳಿಗ್ಗೆ ನಡೆಯಿತು.

ಬಂದಾರುನಿಂದ ಹೊರಟು ಕೊಯ್ಯೂರು ಮಾರ್ಗವಾಗಿ ಬೆಳ್ತಂಗಡಿಗೆ ಹೋಗುವ ಸರಕಾರಿ ಬಸ್ಸು ನಲ್ಲಿ ಸುಮಾರು 25 ಕ್ಕೂ ಹೆಚ್ಚು ಜನರು ಪ್ರಯಾಣಿಕರಿದ್ದರು. ಚಾಲಕ ಅತೀ ವೇಗವಾಗಿ ಬಸ್ ಚಲಾಯಿಸುವ ವೇಳೆಗೆ ಕೊಯ್ಯೂರು ಸಮೀಪದ ಕಾಂತಾಜೆ ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿ ದೊಡ್ಡ ತೋಡಿನ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಅಂದಾಜು 20 ಅಡಿ ಕೆಳಗೆ ಪ್ರತಾಪಕ್ಕೆ ಬೀಳುವುದು ಕೂದಲೇಲೆವ ಅಂತರದಲ್ಲಿ ತಪ್ಪಿತು. ಜೀವ ಹಾರಿ ಹೋದಂತೆ ಆಗಿದೆ ಎಂದು ಪ್ರಯಾಣಿಕರು ನಿಟ್ಟುಸಿರು ಬಿಟ್ಟು ಚಾಲಕನ ದುರ್ವರ್ತನೆಗೆ ಹಿಡಿಶಾಪ ಹಾಕಿದರು.

ಬಸ್ಸಿನ ಎದುರಿನ ಒಂದು ಭಾಗದಲ್ಲಿ ನುಜ್ಜು,ಗುಜ್ಜಾಗಿದೆ .ಪ್ರಯಾಣಿಕರು ಯಾವುದೇ ತೊಂದರೆ ಇಲ್ಲದೇ ಪಾರಾಗಿದ್ದಾರೆ.

Related posts

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!