September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

ಬೆಳ್ತಂಗಡಿ : ಕೊಯ್ಯೂರು ಸಮೀಪದ ಕಾಂತಾಜೆ ಎಂಬಲ್ಲಿ ತಿರುವಿನ ಸೇತುವೆ ತಡೆ ಗೋಡೆಗೆ ಸರಕಾರಿ ಬಸ್ ಡಿಕ್ಕಿಯಾದ ಘಟನೆ ಮೇ.26 ಬೆಳಿಗ್ಗೆ ನಡೆಯಿತು.

ಬಂದಾರುನಿಂದ ಹೊರಟು ಕೊಯ್ಯೂರು ಮಾರ್ಗವಾಗಿ ಬೆಳ್ತಂಗಡಿಗೆ ಹೋಗುವ ಸರಕಾರಿ ಬಸ್ಸು ನಲ್ಲಿ ಸುಮಾರು 25 ಕ್ಕೂ ಹೆಚ್ಚು ಜನರು ಪ್ರಯಾಣಿಕರಿದ್ದರು. ಚಾಲಕ ಅತೀ ವೇಗವಾಗಿ ಬಸ್ ಚಲಾಯಿಸುವ ವೇಳೆಗೆ ಕೊಯ್ಯೂರು ಸಮೀಪದ ಕಾಂತಾಜೆ ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿ ದೊಡ್ಡ ತೋಡಿನ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಅಂದಾಜು 20 ಅಡಿ ಕೆಳಗೆ ಪ್ರತಾಪಕ್ಕೆ ಬೀಳುವುದು ಕೂದಲೇಲೆವ ಅಂತರದಲ್ಲಿ ತಪ್ಪಿತು. ಜೀವ ಹಾರಿ ಹೋದಂತೆ ಆಗಿದೆ ಎಂದು ಪ್ರಯಾಣಿಕರು ನಿಟ್ಟುಸಿರು ಬಿಟ್ಟು ಚಾಲಕನ ದುರ್ವರ್ತನೆಗೆ ಹಿಡಿಶಾಪ ಹಾಕಿದರು.

ಬಸ್ಸಿನ ಎದುರಿನ ಒಂದು ಭಾಗದಲ್ಲಿ ನುಜ್ಜು,ಗುಜ್ಜಾಗಿದೆ .ಪ್ರಯಾಣಿಕರು ಯಾವುದೇ ತೊಂದರೆ ಇಲ್ಲದೇ ಪಾರಾಗಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ‘ನವಚೇತನ’ ಶಿಬಿರ: ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ

Suddi Udaya

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya
error: Content is protected !!