July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

ಬೆಳ್ತಂಗಡಿ : ಕೊಯ್ಯೂರು ಸಮೀಪದ ಕಾಂತಾಜೆ ಎಂಬಲ್ಲಿ ತಿರುವಿನ ಸೇತುವೆ ತಡೆ ಗೋಡೆಗೆ ಸರಕಾರಿ ಬಸ್ ಡಿಕ್ಕಿಯಾದ ಘಟನೆ ಮೇ.26 ಬೆಳಿಗ್ಗೆ ನಡೆಯಿತು.

ಬಂದಾರುನಿಂದ ಹೊರಟು ಕೊಯ್ಯೂರು ಮಾರ್ಗವಾಗಿ ಬೆಳ್ತಂಗಡಿಗೆ ಹೋಗುವ ಸರಕಾರಿ ಬಸ್ಸು ನಲ್ಲಿ ಸುಮಾರು 25 ಕ್ಕೂ ಹೆಚ್ಚು ಜನರು ಪ್ರಯಾಣಿಕರಿದ್ದರು. ಚಾಲಕ ಅತೀ ವೇಗವಾಗಿ ಬಸ್ ಚಲಾಯಿಸುವ ವೇಳೆಗೆ ಕೊಯ್ಯೂರು ಸಮೀಪದ ಕಾಂತಾಜೆ ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿ ದೊಡ್ಡ ತೋಡಿನ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಅಂದಾಜು 20 ಅಡಿ ಕೆಳಗೆ ಪ್ರತಾಪಕ್ಕೆ ಬೀಳುವುದು ಕೂದಲೇಲೆವ ಅಂತರದಲ್ಲಿ ತಪ್ಪಿತು. ಜೀವ ಹಾರಿ ಹೋದಂತೆ ಆಗಿದೆ ಎಂದು ಪ್ರಯಾಣಿಕರು ನಿಟ್ಟುಸಿರು ಬಿಟ್ಟು ಚಾಲಕನ ದುರ್ವರ್ತನೆಗೆ ಹಿಡಿಶಾಪ ಹಾಕಿದರು.

ಬಸ್ಸಿನ ಎದುರಿನ ಒಂದು ಭಾಗದಲ್ಲಿ ನುಜ್ಜು,ಗುಜ್ಜಾಗಿದೆ .ಪ್ರಯಾಣಿಕರು ಯಾವುದೇ ತೊಂದರೆ ಇಲ್ಲದೇ ಪಾರಾಗಿದ್ದಾರೆ.

Related posts

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿವಿಧ ಕ್ಲಬ್ ಗಳ ಉದ್ಘಾಟನೆ : ನಾಯಕತ್ವ ಭವಿಷ್ಯದ ಜೀವನಕ್ಕೆ ಬುನಾದಿ: ಸಿ.ಕೆ. ರೋಹಿಣಿ

Suddi Udaya

ಮುಂಡಾಜೆ: ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!